ಜು. 19 ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

July 15, 2022
10:19 AM

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19‌ ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.

ಜು.19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ, ಜು.20ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಹಾಗೂ ಜು.21ರ ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಳ್ಳಾಲ ತಾಲೂಕಿನ ನಗರಸಭಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದು.

Advertisement
ಅರ್ಜಿದಾರರು ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿರುವ ಬಹು ಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0824-2950997, 9243456629, ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂ.ಸಂಖ್ಯೆ:0824-2453420, 9448635348, ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂ.ಸಂಖ್ಯೆ:0824-2453420, 7019967061, ಪೊಲೀಸ್ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0824-2427237, 9448461816 ಮೂಲಕ ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror