Advertisement
ಜಿಲ್ಲೆ

ಜು. 19 ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Share

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19‌ ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.

ಜು.19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ, ಜು.20ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಹಾಗೂ ಜು.21ರ ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಳ್ಳಾಲ ತಾಲೂಕಿನ ನಗರಸಭಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದು.
ಅರ್ಜಿದಾರರು ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿರುವ ಬಹು ಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0824-2950997, 9243456629, ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂ.ಸಂಖ್ಯೆ:0824-2453420, 9448635348, ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂ.ಸಂಖ್ಯೆ:0824-2453420, 7019967061, ಪೊಲೀಸ್ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0824-2427237, 9448461816 ಮೂಲಕ ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

16 minutes ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

10 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago