ಚಂದ್ರಗ್ರಹಣ ಹಿನ್ನೆಲೆ ಶ್ರೀವಾರಿ ದೇವಸ್ಥಾನವನ್ನು ಮುಚ್ಚಲಾಗಿದ್ದು, ನವೆಂಬರ್ 8 ರಂದು ಚಂದ್ರಗ್ರಹಣದ ಕಾರಣ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು 11 ಗಂಟೆಗಳ ಕಾಲ ಮುಚ್ಚಲಾಗುವುದು.
ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.
ಚಂದ್ರಗ್ರಹಣವು ಮಧ್ಯಾಹ್ನ 2.39 ರಿಂದ 6.27 ರವರೆಗೆ ಮುಂದುವರಿಯುತ್ತದೆ. ನವೆಂಬರ್ 7 ರಂದು ಚಂದ್ರಗ್ರಹಣದ ಹಿನ್ನೆಲೆ ಶಿಫಾರಸು ಪತ್ರಗಳನ್ನು ಸ್ವೀಕರಿಸುವುದಿಲ್ಲ ಎಂದು ಟಿಟಿಡಿ ತಿಳಿಸಿದೆ.
ನವೆಂಬರ್ 8 ರಂದು ಗ್ರಹಣ ದಿನದಂದು ತಿರುಪತಿಯಲ್ಲಿ ಸರ್ವದರ್ಶನಂ ಟೋಕನ್ಗಳ ವಿತರಣೆಯನ್ನು ನಿಲ್ಲಿಸಲಾಗುತ್ತದೆ. ಟಿಟಿಡಿ ವಿರಾಮ ದರ್ಶನಗಳು, ಆರ್ಜಿತ ಸೇವೆಗಳು ಮತ್ತು 300ರೂ. ವಿಶೇಷ ಪ್ರವೇಶ ದರ್ಶನಗಳನ್ನು ಸಹ ರದ್ದುಗೊಳಿಸಿದೆ.
ಗ್ರಹಣ ಮುಗಿದ ನಂತರ, ಸಂಪ್ರೋಕ್ಷಣೆ ಮತ್ತು ಪ್ರದೋಷ ಕಾಲದ ಪೂಜೆಗಳನ್ನು ನೆರವೇರಿಸಿದ ನಂತರ ದೇವಾಲಯವನ್ನು ಪುನಃ ತೆರೆಯಲಾಗುತ್ತದೆ. ವೈಕುಂಠಂ-2 ಕ್ಯೂ ಕಾಂಪ್ಲೆಕ್ಸ್ ಮೂಲಕ ಭಕ್ತರಿಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…