ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.
ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ ಕೊಳೆ, ಡೌಣಿ ರೋಗ ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ, ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ ಶಂಕರಗೌಡ ಹೇಳುತ್ತಾರೆ.
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ, ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ ಹೇಳುತ್ತಾರೆ.
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…