ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.
ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ ಕೊಳೆ, ಡೌಣಿ ರೋಗ ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ, ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ ಶಂಕರಗೌಡ ಹೇಳುತ್ತಾರೆ.
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ, ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ ಹೇಳುತ್ತಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…