ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.
ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ ಕೊಳೆ, ಡೌಣಿ ರೋಗ ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ, ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ ಶಂಕರಗೌಡ ಹೇಳುತ್ತಾರೆ.
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ, ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ ಹೇಳುತ್ತಾರೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…