ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.
ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ ಕೊಳೆ, ಡೌಣಿ ರೋಗ ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ, ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ ಶಂಕರಗೌಡ ಹೇಳುತ್ತಾರೆ.
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ, ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ ಹೇಳುತ್ತಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…