ಅಡಿಕೆಯ ವೈರಲ್‌ ರೋಗಗಳಿಗೆ ಸೂಕ್ತ ಪರಿಹಾರಕ್ಕೆ ಚಿಂತನೆ | ಅಡಿಕೆ ಹಾನಿಕಾರಕವಲ್ಲ- ತಕ್ಷಣ ವರದಿಗೆ ಸೂಚನೆ | ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ |

August 21, 2025
11:13 PM
ವಿಶ್ವ ಆರೋಗ್ಯ ಸಂಸ್ಥೆಯ  ವರದಿಯನ್ನು ಉಲ್ಲೇಖಿಸಿದ  ಸಚಿವರು, ಅಡಿಕೆ ಬಗ್ಗೆ ಈ ವರದಿಯು ಕೆಲವು ಗೊಂದಲಗಳನ್ನು ಸೃಷ್ಟಿಸಿದೆ ಎಂದು ಹೇಳಿದರು. ಈ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ವಿಜ್ಞಾನಿಗಳ ತಂಡವು ಅಧ್ಯಯನಗಳನ್ನು ನಡೆಸುತ್ತಿದೆ ಮತ್ತು ನಿಗದಿತ ಸಮಯದೊಳಗೆ ತನ್ನ ವರದಿಯನ್ನು ಸಲ್ಲಿಸಲು ತಂಡಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.

ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದ್ದು , ಅಡಿಕೆಗೆ ಸಂಬಂಧಿಸಿಂದತೆ ವೈರಲ್‌ ರೋಗಗಳಿಗೆ ಸೂಕ್ತವಾದ ಪರಿಹಾರವನ್ನು ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ  ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.  ಅಡಿಕೆ ಹಾನಿಕಾರಕ ಅಲ್ಲ ಎಂಬುದರ ಬಗ್ಗೆ ವಿಜ್ಞಾನಿಗಳು ಅತಿ ಶೀಘ್ರದಲ್ಲಿ ಸಂಶೋಧನಾ ವರದಿಯನ್ನೂ ಸಲ್ಲಿಸುವಂತೆ ಇದೇ ವೇಳೆ ವಿಜ್ಞಾನಿಗಳಿಗೆ ಸಚಿವರು ನಿರ್ದೇಶನ ನೀಡಿದರು.

Advertisement

ಕೇಂದ್ರ ಕೃಷಿ ಸಚಿವ  ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ಅಡಿಕೆ ಅಭಿವೃದ್ಧಿ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಕರ್ನಾಟಕದ ಅಡಿಕೆ ಬೆಳೆಯುವ ಪ್ರದೇಶಗಳ ಕೇಂದ್ರ ಸಚಿವರು, ರಾಜ್ಯ ಸಚಿವರು ಮತ್ತು ಸಂಸದರು ಸಭೆಯಲ್ಲಿ ಭಾಗವಹಿಸಿದರು.  ಅಡಿಕೆ ಹಾನಿಕಾರಕ ವಿಷಯದ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದ ಸಚಿವರು, ಭಾರತದಲ್ಲಿ ಜನರು ಅನಾದಿ ಕಾಲದಿಂದಲೂ ಅಡಿಕೆ ಸೇವಿಸುತ್ತಿದ್ದಾರೆ ಮತ್ತು ದೇಶದ ಪ್ರತಿಯೊಂದು ಶುಭ ಸಂದರ್ಭದಲ್ಲಿಯೂ ಅಡಿಕೆ ಬಳಕೆ ಇದೆ. ಅಡಿಕೆ ಭಾರತದ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪದ್ಧತಿಗಳಲ್ಲಿ ಮಹತ್ವದ ಸ್ಥಾನವನ್ನು ಹೊಂದಿರುವ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ವಿವಿಧ ಆಲ್ಕಲಾಯ್ಡ್‌ಗಳಿಂದಾಗಿ ಇದನ್ನು ಆಯುರ್ವೇದ ಮತ್ತು ಪಶುವೈದ್ಯಕೀಯ ಔಷಧಿಗಳಲ್ಲಿಯೂ ಬಳಸಲಾಗುತ್ತದೆ ಎಂದು ಸಚಿವರು ಹೇಳಿದರು. ಹೀಗಿರುವಾಗ ಅಡಿಕೆ ಹಾನಿಕಾರಕ ಎನ್ನುವ ಅಂಶ ಬಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ  ವರದಿಯನ್ನು ಉಲ್ಲೇಖಿಸಿದ  ಸಚಿವರು, ಅಡಿಕೆ ಬಗ್ಗೆ ಈ ವರದಿಯು ಕೆಲವು ಗೊಂದಲಗಳನ್ನು ಸೃಷ್ಟಿಸಿದೆ ಎಂದು ಹೇಳಿದರು. ಈ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ವಿಜ್ಞಾನಿಗಳ ತಂಡವು ಅಧ್ಯಯನಗಳನ್ನು ನಡೆಸುತ್ತಿದೆ ಮತ್ತು ನಿಗದಿತ ಸಮಯದೊಳಗೆ ತನ್ನ ವರದಿಯನ್ನು ಸಲ್ಲಿಸಲು ತಂಡಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಅಡಿಕೆ ಮರಗಳನ್ನು ನಾಶಮಾಡುವ ಕೆಲವು ಶೀಲೀಂದ್ರ ಹಾಗೂ ವಿವಿಧ ವೈರಲ್‌  ರೋಗವನ್ನು ವೈಜ್ಞಾನಿಕ ತಂಡಗಳು ಪರಿಹರಿಸುತ್ತಿವೆ ಎಂದ ಸಚಿವರು ವೈರಲ್ ಸೋಂಕುಗಳಿಂದ ಉಂಟಾದ ಭಾರೀ ನಷ್ಟಗಳಿಗೆ ರೈತರಿಗೆ ಸೂಕ್ತ ಪರಿಹಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಕೇಂದ್ರ ಕೃಷಿ ಸಚಿವರು ಹೇಳಿದರು. ಅಡಿಕೆಗಳ ಅಕ್ರಮ ಆಮದು, ತೇವಾಂಶದ ಸಮಸ್ಯೆಗಳು ಮತ್ತು ಸಣ್ಣ ಮತ್ತು ದೊಡ್ಡ ಅಡಿಕೆಗಳ ನಡುವಿನ ಬೆಲೆ ವ್ಯತ್ಯಾಸಗಳಂತಹ ಸಮಸ್ಯೆಗಳನ್ನು ಸಹ ಚರ್ಚಿಸಲಾಯಿತು. ಎಲ್ಲಾ ಸಮಸ್ಯೆಗಳನ್ನು ಸಮಯಕ್ಕೆ ಅನುಗುಣವಾಗಿ ಪರಿಹರಿಸಲಾಗುವುದು ಮತ್ತು ರೈತರು ಮತ್ತು ಅಡಿಕೆ ಉದ್ಯಮದ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ರಕ್ಷಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಅಡಿಕೆಯ  ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಅಡಿಕೆ ಕೃಷಿಯ ಅಭಿವೃದ್ಧಿಗೆ ಮಾರ್ಗಸೂಚಿಯನ್ನು ರೂಪಿಸಲು ವಿಜ್ಞಾನಿಗಳು ಮತ್ತು ತಜ್ಞರ ತಂಡದೊಂದಿಗೆ ಕರ್ನಾಟಕಕ್ಕೆ ವೈಯಕ್ತಿಕವಾಗಿ ಭೇಟಿ ನೀಡುವುದಾಗಿ ಹೇಳಿದರು.  ನಮ್ಮ X ಖಾತೆಯನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ… 

ಭಾರತವು ವಿಶ್ವದ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಒಟ್ಟು ಜಾಗತಿಕ ಉತ್ಪಾದನೆಯ ಸುಮಾರು 63% ರಷ್ಟಿದೆ. 2023–24ರಲ್ಲಿ ಭಾರತವು 9.49 ಲಕ್ಷ ಹೆಕ್ಟೇರ್‌ಗಳಿಂದ ಸುಮಾರು 14 ಲಕ್ಷ ಟನ್ ಅಡಿಕೆ ಉತ್ಪಾದಿಸಿದೆ.  ಕರ್ನಾಟಕವು 6.76 ಲಕ್ಷ ಹೆಕ್ಟೇರ್‌ಗಳಿಂದ 10 ಲಕ್ಷ ಟನ್ ಉತ್ಪಾದನೆಯೊಂದಿಗೆ ಮೊದಲ ಸ್ಥಾನದಲ್ಲಿದೆ, ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಇತರರು ನಂತರದ ಸ್ಥಾನದಲ್ಲಿದ್ದಾರೆ. ಪ್ರಸ್ತುತ ಬೆಲೆಗಳ ಪ್ರಕಾರ ದೇಶದಲ್ಲಿ ಉತ್ಪಾದಿಸುವ ಅಡಿಕೆಯ ಒಟ್ಟು ಮಾರುಕಟ್ಟೆ ಮೌಲ್ಯ ಸುಮಾರು ₹58,664 ಕೋಟಿ. ಭಾರತದಲ್ಲಿ ಸುಮಾರು ಆರು ಮಿಲಿಯನ್ ಜನರು ವೃತ್ತಿಪರವಾಗಿ ಅಡಿಕೆ ಕೃಷಿಯನ್ನು ಅವಲಂಬಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

2023–24ರಲ್ಲಿ ಭಾರತವು ₹400 ಕೋಟಿ ಮೌಲ್ಯದ 10,637 ಟನ್ ಅಡಿಕೆಗಳನ್ನು ರಫ್ತು ಮಾಡಿತು. ಪ್ರಮುಖ ರಫ್ತು ತಾಣಗಳಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್, ವಿಯೆಟ್ನಾಂ, ನೇಪಾಳ, ಮಲೇಷ್ಯಾ ಮತ್ತು ಮಾಲ್ಡೀವ್ಸ್ ಸೇರಿವೆ.

ಅಡಿಕೆ ರೈತರ ಹಿತಾಸಕ್ತಿಗಳನ್ನು ರಕ್ಷಿಸಲು, ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಂಡಿದೆ, ಅಡಿಕೆ ಆಮದು ಒಂದು ಪ್ರಮುಖ ಸವಾಲಾಗಿ ಉಳಿದಿದೆ.ಅವುಗಳನ್ನು ನಿಗ್ರಹಿಸಲು, 100% ಆಮದು ಸುಂಕವನ್ನು ವಿಧಿಸಲಾಗಿದೆ. ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು (MIP) ಪ್ರತಿ ಕೆಜಿಗೆ ₹251 ರಿಂದ ₹351 ಕ್ಕೆ ಪರಿಷ್ಕರಿಸಲಾಗಿದೆ. ಆಮದು ಸರಕುಗಳನ್ನು ಅನುಮೋದಿಸುವ ಮೊದಲು ಗುಣಮಟ್ಟದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSI) ತನ್ನ ಪ್ರಾದೇಶಿಕ ಕಚೇರಿಗಳಿಗೆ ಸೂಚಿಸಿದೆ. ಮೂಲದ ನಿಯಮಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲು ಕಸ್ಟಮ್ಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror