#Rains | ಡಂಗುರ ಬಾರಿಸಿ ಪ್ರವಾಹದ ಎಚ್ಚರಿಕೆ | ಬೆಳಗಾವಿ, ಕಲಬುರಗಿಯಲ್ಲಿ ವರುಣನ ಅಬ್ಬರ | ಶಾಲೆಗಳಿಗೆ ರಜೆ |

July 22, 2023
3:25 PM
ಬೆಳಗಾವಿ, ಚಿಕ್ಕೋಡಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, 14 ಸೇತುವೆಗಳು ಮುಳುಗಡೆ, ಕಲಬುರಗಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶ

ಉತ್ತರ ಕರ್ನಾಟಕದಲ್ಲಿ ಹಲವು ದಿನಗಳಿಂದ ಕಣ್ಣಾಮುಚ್ಚಾಳೆ ಆಡುತ್ತಿದ್ದ ವರುಣ ಈಗ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾನೆ. ಕಳೆದೆರಡು ಮೂರು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿತಿದೆ. ಕಲಬುರಗಿಜಿಲ್ಲಾಡಳಿತ ನದಿತೀರದಲ್ಲಿ ಹೈಅಲರ್ಟ್ ಘೋಷಿಸಿದೆ. ನದಿ/ಹಳ್ಳ/ಕೊಳ್ಳ/ಕೆರೆ ದಂಡೆಗೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಸರ್ವಸನ್ನದ್ದರಾಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಗ್ಗು ಪ್ರದೇಶದ/ನದಿ ಪಾತ್ರದ ಜನರನ್ನ ಸ್ಥಳಾಂತರಿಸಿ ಕಾಳಜಿ ಕೇಂದ್ರ ತೆಗೆಯಬೇಕು. ಈಗಾಗಲೇ ಕಲಬುರಗಿ ಜಿಲ್ಲೆಯಲ್ಲಿ ಕಾಗಿಣಾ ನದಿ, ಭೀಮಾ ನದಿ, ಮುಲ್ಲಮಾರಿ ನದಿ ತುಂಬಿ ಹರಿಯುತ್ತಿದೆ. ವರುಣನ ಅಬ್ಬರದ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror