ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಬಾಂಬೆ ಹೈಕೋರ್ಟ್ ಆದೇಶ |

December 27, 2021
12:35 PM

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿದೆ. ಅಕ್ರಮವಾಗಿ ಅಡಿಕೆ ಸಾಗಿಸಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟದ ವಹಿವಾಟು ದಂಧೆಯಲ್ಲಿ ತೊಡಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಹೈಕೋರ್ಟ್‌ ತಿಳಿಸಿದೆ.

Advertisement
Advertisement
Advertisement
Advertisement

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ವ್ಯಾಪಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಆದೇಶಿಸಿದೆ. ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಖಡಕ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಶುಕ್ರೆ ಮತ್ತು ಅನಿಲ್ ಪನ್ಸಾರೆ ಅವರ ಪೀಠವು,  2016 ರಲ್ಲಿ ಸಲ್ಲಿಸಲಾದ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಸಿಆರ್‌ಪಿಐಎಲ್) ವಿಚಾರಣೆ ನಡೆಸುತ್ತಿದ್ದು,ಈ ಅರ್ಜಿಯಲ್ಲಿ ಮಾರುಕಟ್ಟೆಯಲ್ಲಿ ಕಳಪೆ ಅಡಿಕೆ ಮಾರಾಟವಾಗುತ್ತಿರುವ ವಿಷಯವನ್ನು ಎತ್ತಿ ಹಿಡಿಯಲಾಗಿತ್ತು.

Advertisement

ನಾಗ್ಪುರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟ ಮತ್ತು ಬಳಕೆಯ ಅಕ್ರಮ ವಹಿವಾಟು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಕಳಪೆ ಅಡಿಕೆಯು ಮಾನವ ಬಳಕೆಗೆ ಯೋಗ್ಯವಲ್ಲ ಎಂಬ ಅರಿವು ಇದ್ದರೂ ಕ್ರಮವಾಗುತ್ತಿಲ್ಲ ಏಕೆ ಎಂದು ಪೀಠವು ಪ್ರಶ್ನಿಸಿತು.

ಕಳಪೆ ಅಡಿಕೆ ವಿತರಣೆ ಹಾಗೂ ಅಂತಹ ಕೃತ್ಯಗಳು ಮತ್ತು ಅಪರಾಧಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಕರಣ ದಾಖಲಿಸಿ  ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

Advertisement

ನಾಗ್ಪುರದ ಪೊಲೀಸ್ ಕಮಿಷನರ್ ಅವರು ಕಾನೂನಿನಲ್ಲಿ ಅನುಮತಿಸಬಹುದಾದ ಕಳಪೆ ಗುಣಮಟ್ಟದ ಅಡಿಕೆ ಆಮದು ಹಾಗೂ ಮಾರಾಟ ಮತ್ತು ಬಳಕೆಯಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧ  ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗಳಿಗೆ ಸ್ವಾತಂತ್ರ್ಯ ಇದೆ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ. ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror