ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಬಾಂಬೆ ಹೈಕೋರ್ಟ್ ಆದೇಶ |

December 27, 2021
12:35 PM

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿದೆ. ಅಕ್ರಮವಾಗಿ ಅಡಿಕೆ ಸಾಗಿಸಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟದ ವಹಿವಾಟು ದಂಧೆಯಲ್ಲಿ ತೊಡಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಹೈಕೋರ್ಟ್‌ ತಿಳಿಸಿದೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ವ್ಯಾಪಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಆದೇಶಿಸಿದೆ. ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಖಡಕ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಶುಕ್ರೆ ಮತ್ತು ಅನಿಲ್ ಪನ್ಸಾರೆ ಅವರ ಪೀಠವು,  2016 ರಲ್ಲಿ ಸಲ್ಲಿಸಲಾದ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಸಿಆರ್‌ಪಿಐಎಲ್) ವಿಚಾರಣೆ ನಡೆಸುತ್ತಿದ್ದು,ಈ ಅರ್ಜಿಯಲ್ಲಿ ಮಾರುಕಟ್ಟೆಯಲ್ಲಿ ಕಳಪೆ ಅಡಿಕೆ ಮಾರಾಟವಾಗುತ್ತಿರುವ ವಿಷಯವನ್ನು ಎತ್ತಿ ಹಿಡಿಯಲಾಗಿತ್ತು.

ನಾಗ್ಪುರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟ ಮತ್ತು ಬಳಕೆಯ ಅಕ್ರಮ ವಹಿವಾಟು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಕಳಪೆ ಅಡಿಕೆಯು ಮಾನವ ಬಳಕೆಗೆ ಯೋಗ್ಯವಲ್ಲ ಎಂಬ ಅರಿವು ಇದ್ದರೂ ಕ್ರಮವಾಗುತ್ತಿಲ್ಲ ಏಕೆ ಎಂದು ಪೀಠವು ಪ್ರಶ್ನಿಸಿತು.

ಕಳಪೆ ಅಡಿಕೆ ವಿತರಣೆ ಹಾಗೂ ಅಂತಹ ಕೃತ್ಯಗಳು ಮತ್ತು ಅಪರಾಧಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಕರಣ ದಾಖಲಿಸಿ  ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

ನಾಗ್ಪುರದ ಪೊಲೀಸ್ ಕಮಿಷನರ್ ಅವರು ಕಾನೂನಿನಲ್ಲಿ ಅನುಮತಿಸಬಹುದಾದ ಕಳಪೆ ಗುಣಮಟ್ಟದ ಅಡಿಕೆ ಆಮದು ಹಾಗೂ ಮಾರಾಟ ಮತ್ತು ಬಳಕೆಯಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧ  ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗಳಿಗೆ ಸ್ವಾತಂತ್ರ್ಯ ಇದೆ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ. ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror