MIRROR FOCUS

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಬಾಂಬೆ ಹೈಕೋರ್ಟ್ ಆದೇಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿದೆ. ಅಕ್ರಮವಾಗಿ ಅಡಿಕೆ ಸಾಗಿಸಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟದ ವಹಿವಾಟು ದಂಧೆಯಲ್ಲಿ ತೊಡಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಹೈಕೋರ್ಟ್‌ ತಿಳಿಸಿದೆ.

Advertisement

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ವ್ಯಾಪಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಆದೇಶಿಸಿದೆ. ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಖಡಕ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಶುಕ್ರೆ ಮತ್ತು ಅನಿಲ್ ಪನ್ಸಾರೆ ಅವರ ಪೀಠವು,  2016 ರಲ್ಲಿ ಸಲ್ಲಿಸಲಾದ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಸಿಆರ್‌ಪಿಐಎಲ್) ವಿಚಾರಣೆ ನಡೆಸುತ್ತಿದ್ದು,ಈ ಅರ್ಜಿಯಲ್ಲಿ ಮಾರುಕಟ್ಟೆಯಲ್ಲಿ ಕಳಪೆ ಅಡಿಕೆ ಮಾರಾಟವಾಗುತ್ತಿರುವ ವಿಷಯವನ್ನು ಎತ್ತಿ ಹಿಡಿಯಲಾಗಿತ್ತು.

ನಾಗ್ಪುರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟ ಮತ್ತು ಬಳಕೆಯ ಅಕ್ರಮ ವಹಿವಾಟು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಕಳಪೆ ಅಡಿಕೆಯು ಮಾನವ ಬಳಕೆಗೆ ಯೋಗ್ಯವಲ್ಲ ಎಂಬ ಅರಿವು ಇದ್ದರೂ ಕ್ರಮವಾಗುತ್ತಿಲ್ಲ ಏಕೆ ಎಂದು ಪೀಠವು ಪ್ರಶ್ನಿಸಿತು.

ಕಳಪೆ ಅಡಿಕೆ ವಿತರಣೆ ಹಾಗೂ ಅಂತಹ ಕೃತ್ಯಗಳು ಮತ್ತು ಅಪರಾಧಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಕರಣ ದಾಖಲಿಸಿ  ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

ನಾಗ್ಪುರದ ಪೊಲೀಸ್ ಕಮಿಷನರ್ ಅವರು ಕಾನೂನಿನಲ್ಲಿ ಅನುಮತಿಸಬಹುದಾದ ಕಳಪೆ ಗುಣಮಟ್ಟದ ಅಡಿಕೆ ಆಮದು ಹಾಗೂ ಮಾರಾಟ ಮತ್ತು ಬಳಕೆಯಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧ  ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗಳಿಗೆ ಸ್ವಾತಂತ್ರ್ಯ ಇದೆ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ. ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?

07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ

2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…

11 hours ago

ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…

11 hours ago

ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |

ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು  ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…

11 hours ago

ಬದುಕು ಪುರಾಣ | ದಾನಕ್ಕೆ ಬಂದ ಮಾನ

ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…

14 hours ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

22 hours ago