Advertisement
MIRROR FOCUS

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಬಾಂಬೆ ಹೈಕೋರ್ಟ್ ಆದೇಶ |

Share

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿದೆ. ಅಕ್ರಮವಾಗಿ ಅಡಿಕೆ ಸಾಗಿಸಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟದ ವಹಿವಾಟು ದಂಧೆಯಲ್ಲಿ ತೊಡಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಹೈಕೋರ್ಟ್‌ ತಿಳಿಸಿದೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ವ್ಯಾಪಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಆದೇಶಿಸಿದೆ. ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಖಡಕ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಶುಕ್ರೆ ಮತ್ತು ಅನಿಲ್ ಪನ್ಸಾರೆ ಅವರ ಪೀಠವು,  2016 ರಲ್ಲಿ ಸಲ್ಲಿಸಲಾದ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಸಿಆರ್‌ಪಿಐಎಲ್) ವಿಚಾರಣೆ ನಡೆಸುತ್ತಿದ್ದು,ಈ ಅರ್ಜಿಯಲ್ಲಿ ಮಾರುಕಟ್ಟೆಯಲ್ಲಿ ಕಳಪೆ ಅಡಿಕೆ ಮಾರಾಟವಾಗುತ್ತಿರುವ ವಿಷಯವನ್ನು ಎತ್ತಿ ಹಿಡಿಯಲಾಗಿತ್ತು.

ನಾಗ್ಪುರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟ ಮತ್ತು ಬಳಕೆಯ ಅಕ್ರಮ ವಹಿವಾಟು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಕಳಪೆ ಅಡಿಕೆಯು ಮಾನವ ಬಳಕೆಗೆ ಯೋಗ್ಯವಲ್ಲ ಎಂಬ ಅರಿವು ಇದ್ದರೂ ಕ್ರಮವಾಗುತ್ತಿಲ್ಲ ಏಕೆ ಎಂದು ಪೀಠವು ಪ್ರಶ್ನಿಸಿತು.

ಕಳಪೆ ಅಡಿಕೆ ವಿತರಣೆ ಹಾಗೂ ಅಂತಹ ಕೃತ್ಯಗಳು ಮತ್ತು ಅಪರಾಧಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಕರಣ ದಾಖಲಿಸಿ  ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

ನಾಗ್ಪುರದ ಪೊಲೀಸ್ ಕಮಿಷನರ್ ಅವರು ಕಾನೂನಿನಲ್ಲಿ ಅನುಮತಿಸಬಹುದಾದ ಕಳಪೆ ಗುಣಮಟ್ಟದ ಅಡಿಕೆ ಆಮದು ಹಾಗೂ ಮಾರಾಟ ಮತ್ತು ಬಳಕೆಯಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧ  ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗಳಿಗೆ ಸ್ವಾತಂತ್ರ್ಯ ಇದೆ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ. ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ

ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…

16 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

42 minutes ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

6 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

17 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

22 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

23 hours ago