ಕಳಪೆ ಗುಣಮಟ್ಟದ ಅಡಿಕೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ಇದೀಗ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ತಂಡವು ತಪಾಸಣೆ ನಡೆಸಿ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.
ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ತಂಡವು ನಾಗ್ಪುರದಲ್ಲಿ 3.36 ಕೋಟಿ ಮೌಲ್ಯದ 84,537 ಕಿಲೋಗ್ರಾಂಗಳಷ್ಟು ಅಡಿಕೆಯನ್ನು ಗುರುವಾರ ವಶಪಡಿಸಿಕೊಂಡಿದೆ ಈ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳ ಸಂದೇಹ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಯುತ್ತಿದೆ.
ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿ ಇಲ್ಲಿನ ಅಡಿಕೆ ಜೊತೆ ಬೆರೆಸಿ ಮಾರುಕಟ್ಟೆಗೆ ಬಿಡುವ ಜಾಲವೊಂದು ಸಕ್ರಿಯವಾಗಿದೆ ಎಂದು ಶಂಕಿಸಲಾಗಿದೆ. ಇದರ ಜೊತೆಗೆ ಅಡಿಕೆಗೆ ಇತರ ಕಲಬೆರಕೆ ವಸ್ತುಗಳನ್ನೂ ಸೇರಿಸಿ ಮಾರುವ ಬಗ್ಗೆಯೂ ಸಂದೇಹ ಇದೆ. ಈ ಎಲ್ಲಾ ದೂರುಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದಾಳಿ ನಡೆದಿದೆ. ಈಗ ತನಿಖೆ ನಡೆಯುತ್ತಿದೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…