Advertisement
MIRROR FOCUS

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

Share

ದೇಶಾದ್ಯಂತ LPG ಸಿಲಿಂಡರ್‌ಗಳ ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನದಲ್ಲಿ 51.5 ಲಕ್ಷಕ್ಕೂ ಹೆಚ್ಚು ಸಿಲಿಂಡರ್‌ಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

LPG ಸಿಲಿಂಡರ್‌ಗಳನ್ನು ಸಂಗ್ರಹಣೆ ಮಾಡುವುದು ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ದೇಶದಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಿನ್ನೆ 3,400ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, 214 LPG ವಿತರಕರಿಗೆ ದಂಡ ವಿಧಿಸಲಾಗಿದೆ. ಜೊತೆಗೆ 55 ವಿತರಕರ ಪರವಾನಗಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಫೆಬ್ರವರಿ ತಿಂಗಳಲ್ಲಿ ದಿನಸಿ ಸರಾಸರಿ 77 ಸಾವಿರ 5 ಕೆ.ಜಿ ಸಿಲಿಂಡರ್ ಮಾರಾಟವಾಗುತ್ತಿದ್ದರೆ, ಈಗ ದೇಶಾದ್ಯಂತ 1 ಲಕ್ಷಕ್ಕೂ ಹೆಚ್ಚು ಸಣ್ಣ ಗಾತ್ರದ ಸಿಲಿಂಡರ್‌ಗಳು ವಿತರಣೆ ಆಗುತ್ತಿವೆ. ಈ 5 ಕೆ.ಜಿ LPG ಸಿಲಿಂಡರ್‌ಗಳನ್ನು ಮುಖ್ಯವಾಗಿ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ದುರ್ಬಲ ವರ್ಗದವರಿಗೆ ಒದಗಿಸಲಾಗುತ್ತಿದೆ.

ಇದರ ಜೊತೆಗೆ, ಮಾರ್ಚ್ ತಿಂಗಳಿಂದ ಇಲ್ಲಿಯವರೆಗೆ ಸುಮಾರು 4.15 ಲಕ್ಷ PNG (ಪೈಪ್ ನ್ಯಾಚುರಲ್ ಗ್ಯಾಸ್) ಸಂಪರ್ಕಗಳನ್ನು ನೀಡಲಾಗಿದೆ. ಹೊಸದಾಗಿ 4.55 ಲಕ್ಷ ಗ್ರಾಹಕರು PNG ಸಂಪರ್ಕಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಹಡಗುಗಳು ಮತ್ತು ನಾವಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಫೆಬ್ರವರಿ 28ರಿಂದ ಇಲ್ಲಿಯವರೆಗೆ ಸುಮಾರು 8.71 ಲಕ್ಷ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India recorded distribution of over 5.15 million LPG cylinders in a single day, indicating stable supply. The government has taken strict action against illegal storage and black marketing, while also expanding access through small cylinders and PNG connections.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

10 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

10 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

10 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

11 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

21 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago