#LPGPrices | ಗ್ರಾಹಕರಿಗೆ ಸಿಹಿ ಸುದ್ದಿ | ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ | ಕೇಂದ್ರ ಸಂಪುಟದಿಂದ ಅನುಮೋದನೆ

August 29, 2023
6:10 PM
ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಎಲ್‌ ಪಿ ಜಿ ದರ ಇಳಿಕೆಯಾಗಿ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ.

ಗಗನಕ್ಕೇರಿದ್ದ LPG ಸಿಲಿಂಡರ್‌ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ #LPGCylinderPrice 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.

ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಟೈಮ್ಸ್ ಆಫ್ ಇಂಡಿಯಾದಲ್ಲಿ ಬಂದಿರುವ ವರದಿ ಪ್ರಕಾರ ಉಜ್ವಲ ಯೋಜನೆ ಅಡಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 200 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ, ಈ ಸ್ಕೀಮ್​ನಲ್ಲಿ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ ನೀಡಲಾಗುವ ಒಟ್ಟು ಸಬ್ಸಿಡಿ 400 ರೂ ಆಗುತ್ತದೆ. ಸಬ್ಸಿಡಿರಹಿತ 14 ಕಿಲೋ ಎಲ್​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ.

Advertisement

ಮೇ ತಿಂಗಳಿಂದೀಚೆ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್​ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ ಹೆಚ್ಚಳವಾಗಿತ್ತು. ಈಗ ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಿಸಿದೆ. ಕೇಂದ್ರ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಸ್ಕೀಮ್ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು 200 ರೂನಷ್ಟು ಇಳಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಸಬ್ಸಿಡಿ ನಿರ್ಧಾರದಿಂದ ಒಂದು ವರ್ಷದಲ್ಲಿ ಸುಮಾರು 7,500 ಕೋಟಿ ರೂ ಹೊರೆಯಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror