Advertisement
ಪ್ರಮುಖ

#LPGPrices | ಗ್ರಾಹಕರಿಗೆ ಸಿಹಿ ಸುದ್ದಿ | ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ | ಕೇಂದ್ರ ಸಂಪುಟದಿಂದ ಅನುಮೋದನೆ

Share

ಗಗನಕ್ಕೇರಿದ್ದ LPG ಸಿಲಿಂಡರ್‌ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ #LPGCylinderPrice 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.

Advertisement
Advertisement

ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಟೈಮ್ಸ್ ಆಫ್ ಇಂಡಿಯಾದಲ್ಲಿ ಬಂದಿರುವ ವರದಿ ಪ್ರಕಾರ ಉಜ್ವಲ ಯೋಜನೆ ಅಡಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 200 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ, ಈ ಸ್ಕೀಮ್​ನಲ್ಲಿ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ ನೀಡಲಾಗುವ ಒಟ್ಟು ಸಬ್ಸಿಡಿ 400 ರೂ ಆಗುತ್ತದೆ. ಸಬ್ಸಿಡಿರಹಿತ 14 ಕಿಲೋ ಎಲ್​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ.

Advertisement

ಮೇ ತಿಂಗಳಿಂದೀಚೆ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್​ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ ಹೆಚ್ಚಳವಾಗಿತ್ತು. ಈಗ ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಿಸಿದೆ. ಕೇಂದ್ರ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಸ್ಕೀಮ್ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು 200 ರೂನಷ್ಟು ಇಳಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಸಬ್ಸಿಡಿ ನಿರ್ಧಾರದಿಂದ ಒಂದು ವರ್ಷದಲ್ಲಿ ಸುಮಾರು 7,500 ಕೋಟಿ ರೂ ಹೊರೆಯಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ

ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ…

15 hours ago

ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ

30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |

ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ…

1 day ago

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

2 days ago

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…

2 days ago