Advertisement
ಪ್ರಮುಖ

#LPGPrices | ಗ್ರಾಹಕರಿಗೆ ಸಿಹಿ ಸುದ್ದಿ | ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ | ಕೇಂದ್ರ ಸಂಪುಟದಿಂದ ಅನುಮೋದನೆ

Share

ಗಗನಕ್ಕೇರಿದ್ದ LPG ಸಿಲಿಂಡರ್‌ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ #LPGCylinderPrice 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.

ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಟೈಮ್ಸ್ ಆಫ್ ಇಂಡಿಯಾದಲ್ಲಿ ಬಂದಿರುವ ವರದಿ ಪ್ರಕಾರ ಉಜ್ವಲ ಯೋಜನೆ ಅಡಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 200 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ, ಈ ಸ್ಕೀಮ್​ನಲ್ಲಿ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ ನೀಡಲಾಗುವ ಒಟ್ಟು ಸಬ್ಸಿಡಿ 400 ರೂ ಆಗುತ್ತದೆ. ಸಬ್ಸಿಡಿರಹಿತ 14 ಕಿಲೋ ಎಲ್​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ.

ಮೇ ತಿಂಗಳಿಂದೀಚೆ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್​ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ ಹೆಚ್ಚಳವಾಗಿತ್ತು. ಈಗ ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಿಸಿದೆ. ಕೇಂದ್ರ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಸ್ಕೀಮ್ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು 200 ರೂನಷ್ಟು ಇಳಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಸಬ್ಸಿಡಿ ನಿರ್ಧಾರದಿಂದ ಒಂದು ವರ್ಷದಲ್ಲಿ ಸುಮಾರು 7,500 ಕೋಟಿ ರೂ ಹೊರೆಯಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

18 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago