Advertisement
ಪ್ರಮುಖ

#LPGPrices | ಗ್ರಾಹಕರಿಗೆ ಸಿಹಿ ಸುದ್ದಿ | ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ | ಕೇಂದ್ರ ಸಂಪುಟದಿಂದ ಅನುಮೋದನೆ

Share

ಗಗನಕ್ಕೇರಿದ್ದ LPG ಸಿಲಿಂಡರ್‌ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ #LPGCylinderPrice 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.

ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಟೈಮ್ಸ್ ಆಫ್ ಇಂಡಿಯಾದಲ್ಲಿ ಬಂದಿರುವ ವರದಿ ಪ್ರಕಾರ ಉಜ್ವಲ ಯೋಜನೆ ಅಡಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 200 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ, ಈ ಸ್ಕೀಮ್​ನಲ್ಲಿ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ ನೀಡಲಾಗುವ ಒಟ್ಟು ಸಬ್ಸಿಡಿ 400 ರೂ ಆಗುತ್ತದೆ. ಸಬ್ಸಿಡಿರಹಿತ 14 ಕಿಲೋ ಎಲ್​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ.

ಮೇ ತಿಂಗಳಿಂದೀಚೆ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್​ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ ಹೆಚ್ಚಳವಾಗಿತ್ತು. ಈಗ ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಿಸಿದೆ. ಕೇಂದ್ರ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಸ್ಕೀಮ್ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು 200 ರೂನಷ್ಟು ಇಳಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಸಬ್ಸಿಡಿ ನಿರ್ಧಾರದಿಂದ ಒಂದು ವರ್ಷದಲ್ಲಿ ಸುಮಾರು 7,500 ಕೋಟಿ ರೂ ಹೊರೆಯಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

12 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

12 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago