Advertisement
MIRROR FOCUS

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

Share

ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಉಜ್ವಲ ಅಡಿಯಲ್ಲಿ 14.2 ಕೆಜಿ ಎಲ್‌ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲೇತರ ಬಳಕೆದಾರರಿಗೆ 803 ರಿಂದ 853 ಕ್ಕೆ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.……..ಮುಂದೆ ಓದಿ…..

ಕಳೆದ ವಾರ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್  ಬೆಲೆಯನ್ನೂ ಈಗ ಏರಿಸಿದೆ.  ಪೆಟ್ರೋಲ್ ಮತ್ತು ಡೀಸಲ್ ಮೇಲೆ ಕೇಂದ್ರ ಅಬಕಾರಿ ಸುಂಕದಲ್ಲಿ ಎರಡು ರೂ ಏರಿಕೆ ಮಾಡಲಾಗಿರುವ ಸುದ್ದಿಯ ನಂತರ ಇದೀಗ  ಎಲ್​​ಪಿಜಿ ಶಾಕ್ ಬಂದಿದೆ.

ಇಂದು ಮುಂಜಾನೆ, ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ, ಈ ಹೆಚ್ಚಳವನ್ನು ಗ್ರಾಹಕರ ಮೇಲೆ ಹಾಕಲಾಗಿಲ್ಲ, ಸದ್ಯ ತೈಲ ಮಾರುಕಟ್ಟೆ ಕಂಪನಿಗಳು ಭರಿಸುತ್ತವೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುಂಕಗಳ ಹೆಚ್ಚಳವು ಏಪ್ರಿಲ್ 8 ರಿಂದ ಜಾರಿಗೆ ಬರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

5 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

9 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago