Advertisement
MIRROR FOCUS

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

Share

ಭಾರತದ ಹಲವು ಮಹಾನಗರಗಳಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಕೊರತೆ ಕಂಡುಬರುತ್ತಿರುವುದು ಹೋಟೆಲ್‌ ಮತ್ತು ಆಹಾರ ವಿತರಣೆ ಕ್ಷೇತ್ರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಸಾಗಣೆ ಅಡಚಣೆಗಳಿಂದ LPG ಆಮದು ಸರಬರಾಜು ಸರಪಳಿ ಮೇಲೆ ಒತ್ತಡ ಉಂಟಾಗಿ, ಕೆಲವು ನಗರಗಳಲ್ಲಿ  ಅಡುಗೆ ಗ್ಯಾಸ್  ಲಭ್ಯತೆ ಕುಸಿದಿರುವ ವರದಿಗಳು ಬರುತ್ತಿವೆ.‌ ಈ ನಡುವೆ ಭಾರತದಲ್ಲಿ LPG ಸರಬರಾಜು ಬಗ್ಗೆ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗೃಹ ಬಳಕೆ LPG ಗೆ ಆದ್ಯತೆ ನೀಡಲು ರಾಜ್ಯಗಳಿಗೆ ಸೂಚನೆ ನೀಡಿದೆ.

ಫೈನಾಶ್ಸಿಯಲ್‌ ಎಕ್ಸ್‌ಪ್ರೆಸ್‌ ವರದಿ ಪ್ರಕಾರ,  ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಸಣ್ಣ ಹೋಟೆಲ್‌ಗಳು, ಧಾಬಾಗಳು, ಸೇರಿದಂತೆ ಸಣ್ಣ ಅಂಗಡಿಗಳು ಗ್ಯಾಸ್ ಸಿಗದೇ ಮೆನು ಕಡಿಮೆ ಮಾಡುವುದು ಅಥವಾ ತಾತ್ಕಾಲಿಕವಾಗಿ ಕಾರ್ಯಾಚರಣೆ ಕಡಿಮೆ ಮಾಡುವ ಪರಿಸ್ಥಿತಿ ಎದುರಿಸುತ್ತಿವೆ. ಕೆಲವೆಡೆ ವಾಣಿಜ್ಯ ಸಿಲಿಂಡರ್ ಗಳ ಬೆಲೆ ಹೆಚ್ಚಾಗಿ ಬ್ಲಾಕ್‌ ಮಾರ್ಕೆಟ್ ಚಟುವಟಿಕೆಗಳ ಆತಂಕವೂ ವ್ಯಕ್ತವಾಗಿದೆ ಎಂದು ವರದಿ ಮಾಡಿದೆ.

Advertisement

ಸರ್ಕಾರ ಗೃಹ ಬಳಕೆದಾರರಿಗೆ LPG ಸರಬರಾಜಿಗೆ ಆದ್ಯತೆ ನೀಡಲು ತೈಲ ಕಂಪನಿಗಳಿಗೆ ಸೂಚಿಸಿರುವ ಹಿನ್ನೆಲೆ, ವಾಣಿಜ್ಯ ಬಳಕೆದಾರರಿಗೆ ಸಿಲಿಂಡರ್‌ ಸರಬರಾಜು ಕಡಿಮೆಯಾಗಿರುವುದಾಗಿ ಉದ್ಯಮ ವಲಯ ಹೇಳುತ್ತಿದೆ. ಇದರಿಂದ ಆಹಾರ ಸರಬರಾಜು ಇಳಿಕೆ ಹಾಗೂ ಇತರ ಆದಾಯಕ್ಕೂ ಪರಿಣಾಮ ಬೀರುತ್ತಿರುವುದು ಗಮನಾರ್ಹ.

ಇನ್ನೊಂದೆಡೆ‌ ಭಯದಿಂದ ಅನಗತ್ಯ ಬುಕಿಂಗ್ ಹಾಗೂ ಸರಬರಾಜು ಒತ್ತಡದಿಂದ ಕೆಲವು ಪ್ರದೇಶಗಳಲ್ಲಿ ಗೃಹಬಳಕೆಯ ಅನಿಲ ವಿತರಣೆಗಳಲ್ಲಿ ತಡವಾಗುತ್ತಿರುವ ವರದಿಗಳೂ ಲಭ್ಯವಾಗಿವೆ. ಆದರೆ ದೊಡ್ಡ ಮಟ್ಟದ ಗೃಹ ಬಳಕೆ LPG ಕೊರತೆ ಇನ್ನೂ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ತಜ್ಞರ ಪ್ರಕಾರ ತೈಲ ಸಾಗಣೆ ಅಡಚಣೆ ಮುಂದುವರಿದರೆ LPG ಮಾರುಕಟ್ಟೆಯಲ್ಲಿ ಇನ್ನಷ್ಟು ಒತ್ತಡ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಹೋಟೆಲ್‌, ಕ್ಯಾಟರಿಂಗ್‌, ಸಣ್ಣ ಆಹಾರ ಉದ್ಯಮಗಳು ಪರ್ಯಾಯ ಅಡುಗೆ ವಿಧಾನಗಳತ್ತ ತಿರುಗುವ ಅನಿವಾರ್ಯತೆ ಎದುರಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Commercial LPG shortages in major Indian cities are affecting restaurants, cloud kitchens, and food delivery operations due to supply disruptions linked to West Asian tensions. While the government is prioritizing domestic LPG consumers, delays and localized panic booking have been reported in some regions.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

8 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

11 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

11 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

19 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

21 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

21 hours ago