Advertisement
ಸುದ್ದಿಗಳು

ಪರಿಸರೋತ್ಸವದೊಂದಿಗೆ ಬಿಡುಗಡೆಯಾದ “Echo…. The reflection of reality” ಕಿರುಚಿತ್ರ |

Share

“ಇಕೋ.. ನೈಜತೆಯ ಪ್ರತಿಫಲನ”(Echo…. The reflection of reality) ಕಿರಚಿತ್ರ ಬಿಡುಗಡೆ ಸಮಾರಂಭವು ರಂಗಚೇತನ ಕಾಸರಗೋಡು ಮತ್ತು ಬಿ.ಪಿ ಪಿ. ಎ. ಎಲ್. ಪಿ. ಶಾಲೆ ಪೆರ್ಮುದೆ ಸಹಯೋಗದೊಂದಿಗೆ ನಡೆಯಿತು.

Advertisement

ರಂಗಚೇತನ ಕಾಸರಗೋಡು ಮತ್ತು ರಿದಮ್ ಮೀಡಿಯಾ ಕ್ರೀಯೇಷನ್ ಅವರ ಗಡಿನಾಡ ಖ್ಯಾತ ಯುವ ರಂಗಕರ್ಮಿ ಸದಾಶಿವ ಬಾಲಮಿತ್ರ ಅವರ ಚಿತ್ರಕಥೆ, ನಿರ್ದೇಶನ ,  ಮೆಲ್ವಿನ್ ಮಾಸ್ಟರ್ ಪೆರ್ಮುದೆ ಹಾಗೂ  ರಂಜಿತ್ ರಮಣ ಶರ್ಮರವರ ಕ್ಯಾಮರಾ ,ಎಡಿಟಿಂಗ್, ಡಬ್ಬಿಂಗ್ ಮತ್ತು ಸಂಗೀತದೊಂದಿಗೆ , ಖ್ಯಾತ ಚಲನಚಿತ್ರ ನಟ ಬಾಲಕೃಷ್ಣ ಅಡೂರು , ಭರವಸೆಯ ಬೆಳಕು ಸಮನ್ವಿತಾ ಗಣೇಶ್ ಅಣಂಗೂರು ಸಹಿತ ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡ ಶಾಲೆಗಳ ಐವತ್ತಕ್ಕೂ ಹೆಚ್ಚಿನ ಪ್ರತಿಭಾವಂತ ಮಕ್ಕಳು ಹಾಗೂ ರಂಗಚೇತನ ಕಾಸರಗೋಡು ಇದರ ಸದ್ಯರು ಮನೋಜ್ಞ ಅಭಿನಯ ನೀಡಿದ ಕಿರಚಿತ್ರ ಬಿಡುಗಡೆ ಸಮಾರಂಭವು ರಂಗಚೇತನ ಕಾಸರಗೋಡು ಮತ್ತು ಬಿ.ಪಿ ಪಿ. ಎ. ಎಲ್. ಪಿ. ಶಾಲೆ ಪೆರ್ಮುದೆ ಸಹಯೋಗದೊಂದಿಗೆ ವೈವಿಧ್ಯಮಯ ಕಾರ್ಯಕ್ರಮದೊಂದಿಗೆ ನಡೆಯಿತು.

ವಿಶ್ವ ಪರಿಸರ ದಿನದಂದು ” ಪರಿಸರೋತ್ಸವ ದೊಂದಿಗೆ ಪೆರ್ಮುದೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಅರಣ್ಯ ಇಲಾಖೆಯ ಸಹಕಾರದೊಂದಿಗೆ “ಶಾಲೆಗೊಂದು ವಿದ್ಯಾವನ”  ಮುರಳಿ ಮಾದವ ಪೆಲ್ತಾಜೆ ಅವರಿಂದ “ಒಂದೇ ಒಂದು ಭೂಮಿ,” ಪರಿಸರ ಜಾಗೃತಿ ಕಾರ್ಯಾಗಾರ, ಅಪೂರ್ವ ಗಿಡಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಗಳು ಗಮನಸೆಳೆಯಿತು.

ನಂತರ ನಡೆದ “ಇಕ್ಕೋ…” ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ “ಲಿಮ್ಕಾ ವಿಶ್ವ ದಾಖಲೆಯ ಯೋಗ ರತ್ನ ಕು.ಅಭಿಜ್ಞಾನ ಹರೀಶ್ ಮತ್ತು  yoga for kid,s kasaragod ತಂಡದ ಯೋಗ ನೃತ್ಯ, ಬಾಲಕೃಷ್ಣ ಮಾಸ್ಟರ್ ಮಂಜೇಶ್ವರ ಇವರ ಶಿಷ್ಯೆಯರಾದ ತನ್ವಿ.ಕೆ.ಟಿ.ಮತ್ತು ಇಷಿಕಾ.ಕೆ.ಟಿ, ನೃತ್ಯ ವಿದೂಷಿ ವಿದ್ಯಾಲಕ್ಷ್ಮಿ ಯವರ ಶಿಷ್ಯರಾದ ಚೇತನ್ ಎಡಕ್ಕಾನ ಮತ್ತು ನೂತನ್ ಎಡಕ್ಕಾನರವರ ಭರತನಾಟ್ಯ, ಅರಸು ಡ್ಯಾನ್ಸ್ ಅಕಾಡೆಮಿ ಮಂಜೇಶ್ವರ ತಂಡದ ನೃತ್ಯ ರೂಪಕಗಳು ಸಾಂಸ್ಕೃತಿಕ ಸಂಭ್ರಮವನ್ನು ನೀಡಿತು.

ಸಂಜೆ ಚಲನಚಿತ್ರ ನಟ  ಬಾಲಕೃಷ್ಣ ಮಾಸ್ಟರ್ ಅಡೂರು ಅವರ ಅದ್ಯಕ್ಷತೆ ಯಲ್ಲಿ ನಡೆದ ಪರಿಸರ ಕಾಳಜಿಯ ಇಕ್ಕೋ ಕಿರುಚಿತ್ರವನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಗಳಾದ  ದಿನೇಶ್. ವಿ ಲೋಕಾರ್ಪಣೆಗೊಳಿಸಿದರು. ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತ ಶಿವ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷರಾದ  ಚನಿಯಪ್ಪ ನಾಯಕ್ ,ಮಂಜೇಶ್ವರ ಬಿ.ಆರ್.ಸಿ ಯ ಬಿ ಪಿ.ಸಿ  ವಿಜಯಕುಮಾರ್ ಪಾವಳ ಮೊದಲಾದವರು ಕಾರ್ಯಕ್ರಮ ದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿಗಳು ರಂಗಚೇತನ ಗೌರವಾಧ್ಯಕ್ಷ ಯತೀಶ್ ಕುಮಾರ್ ರೈ ಮುಳ್ಳೇರಿಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತೆ ವಿದ್ಯಾ ಗಣೇಶ್ ಅಣಂಗೂರು ನಿರೂಪಿಸಿದರು.ಕಾರ್ಯದರ್ಶಿ ಅಶೋಕ ಕುಮಾರ್ ಕೊಡ್ಲಮೊಗೆರು ಸ್ವಾಗತಿಸಿ ,ಸದಾಶಿವ ಬಾಲಮಿತ್ರ ವಂದಿಸಿದರು. ಕಾರ್ಯಕ್ರಮ ದಲ್ಲಿ ಕಿರುಚಿತ್ರ ತಂಡದ ಎಲ್ಲಾ ಸದಸ್ಯರನ್ನು ರಂಗಚೇತನ ಕಾಸರಗೋಡು ವತಿಯಿಂದ ಗೌರವಿಸಲಾಯಿತು. ಬಳಿಕ ಕಿರುಚಿತ್ರದ ಪ್ರದರ್ಶನ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

4 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

4 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

17 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

23 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago