Advertisement
ಸುದ್ದಿಗಳು

ಪರಿಸರೋತ್ಸವದೊಂದಿಗೆ ಬಿಡುಗಡೆಯಾದ “Echo…. The reflection of reality” ಕಿರುಚಿತ್ರ |

Share

“ಇಕೋ.. ನೈಜತೆಯ ಪ್ರತಿಫಲನ”(Echo…. The reflection of reality) ಕಿರಚಿತ್ರ ಬಿಡುಗಡೆ ಸಮಾರಂಭವು ರಂಗಚೇತನ ಕಾಸರಗೋಡು ಮತ್ತು ಬಿ.ಪಿ ಪಿ. ಎ. ಎಲ್. ಪಿ. ಶಾಲೆ ಪೆರ್ಮುದೆ ಸಹಯೋಗದೊಂದಿಗೆ ನಡೆಯಿತು.

ರಂಗಚೇತನ ಕಾಸರಗೋಡು ಮತ್ತು ರಿದಮ್ ಮೀಡಿಯಾ ಕ್ರೀಯೇಷನ್ ಅವರ ಗಡಿನಾಡ ಖ್ಯಾತ ಯುವ ರಂಗಕರ್ಮಿ ಸದಾಶಿವ ಬಾಲಮಿತ್ರ ಅವರ ಚಿತ್ರಕಥೆ, ನಿರ್ದೇಶನ ,  ಮೆಲ್ವಿನ್ ಮಾಸ್ಟರ್ ಪೆರ್ಮುದೆ ಹಾಗೂ  ರಂಜಿತ್ ರಮಣ ಶರ್ಮರವರ ಕ್ಯಾಮರಾ ,ಎಡಿಟಿಂಗ್, ಡಬ್ಬಿಂಗ್ ಮತ್ತು ಸಂಗೀತದೊಂದಿಗೆ , ಖ್ಯಾತ ಚಲನಚಿತ್ರ ನಟ ಬಾಲಕೃಷ್ಣ ಅಡೂರು , ಭರವಸೆಯ ಬೆಳಕು ಸಮನ್ವಿತಾ ಗಣೇಶ್ ಅಣಂಗೂರು ಸಹಿತ ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡ ಶಾಲೆಗಳ ಐವತ್ತಕ್ಕೂ ಹೆಚ್ಚಿನ ಪ್ರತಿಭಾವಂತ ಮಕ್ಕಳು ಹಾಗೂ ರಂಗಚೇತನ ಕಾಸರಗೋಡು ಇದರ ಸದ್ಯರು ಮನೋಜ್ಞ ಅಭಿನಯ ನೀಡಿದ ಕಿರಚಿತ್ರ ಬಿಡುಗಡೆ ಸಮಾರಂಭವು ರಂಗಚೇತನ ಕಾಸರಗೋಡು ಮತ್ತು ಬಿ.ಪಿ ಪಿ. ಎ. ಎಲ್. ಪಿ. ಶಾಲೆ ಪೆರ್ಮುದೆ ಸಹಯೋಗದೊಂದಿಗೆ ವೈವಿಧ್ಯಮಯ ಕಾರ್ಯಕ್ರಮದೊಂದಿಗೆ ನಡೆಯಿತು.

ವಿಶ್ವ ಪರಿಸರ ದಿನದಂದು ” ಪರಿಸರೋತ್ಸವ ದೊಂದಿಗೆ ಪೆರ್ಮುದೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಅರಣ್ಯ ಇಲಾಖೆಯ ಸಹಕಾರದೊಂದಿಗೆ “ಶಾಲೆಗೊಂದು ವಿದ್ಯಾವನ”  ಮುರಳಿ ಮಾದವ ಪೆಲ್ತಾಜೆ ಅವರಿಂದ “ಒಂದೇ ಒಂದು ಭೂಮಿ,” ಪರಿಸರ ಜಾಗೃತಿ ಕಾರ್ಯಾಗಾರ, ಅಪೂರ್ವ ಗಿಡಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಗಳು ಗಮನಸೆಳೆಯಿತು.

ನಂತರ ನಡೆದ “ಇಕ್ಕೋ…” ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ “ಲಿಮ್ಕಾ ವಿಶ್ವ ದಾಖಲೆಯ ಯೋಗ ರತ್ನ ಕು.ಅಭಿಜ್ಞಾನ ಹರೀಶ್ ಮತ್ತು  yoga for kid,s kasaragod ತಂಡದ ಯೋಗ ನೃತ್ಯ, ಬಾಲಕೃಷ್ಣ ಮಾಸ್ಟರ್ ಮಂಜೇಶ್ವರ ಇವರ ಶಿಷ್ಯೆಯರಾದ ತನ್ವಿ.ಕೆ.ಟಿ.ಮತ್ತು ಇಷಿಕಾ.ಕೆ.ಟಿ, ನೃತ್ಯ ವಿದೂಷಿ ವಿದ್ಯಾಲಕ್ಷ್ಮಿ ಯವರ ಶಿಷ್ಯರಾದ ಚೇತನ್ ಎಡಕ್ಕಾನ ಮತ್ತು ನೂತನ್ ಎಡಕ್ಕಾನರವರ ಭರತನಾಟ್ಯ, ಅರಸು ಡ್ಯಾನ್ಸ್ ಅಕಾಡೆಮಿ ಮಂಜೇಶ್ವರ ತಂಡದ ನೃತ್ಯ ರೂಪಕಗಳು ಸಾಂಸ್ಕೃತಿಕ ಸಂಭ್ರಮವನ್ನು ನೀಡಿತು.

ಸಂಜೆ ಚಲನಚಿತ್ರ ನಟ  ಬಾಲಕೃಷ್ಣ ಮಾಸ್ಟರ್ ಅಡೂರು ಅವರ ಅದ್ಯಕ್ಷತೆ ಯಲ್ಲಿ ನಡೆದ ಪರಿಸರ ಕಾಳಜಿಯ ಇಕ್ಕೋ ಕಿರುಚಿತ್ರವನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಗಳಾದ  ದಿನೇಶ್. ವಿ ಲೋಕಾರ್ಪಣೆಗೊಳಿಸಿದರು. ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತ ಶಿವ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷರಾದ  ಚನಿಯಪ್ಪ ನಾಯಕ್ ,ಮಂಜೇಶ್ವರ ಬಿ.ಆರ್.ಸಿ ಯ ಬಿ ಪಿ.ಸಿ  ವಿಜಯಕುಮಾರ್ ಪಾವಳ ಮೊದಲಾದವರು ಕಾರ್ಯಕ್ರಮ ದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿಗಳು ರಂಗಚೇತನ ಗೌರವಾಧ್ಯಕ್ಷ ಯತೀಶ್ ಕುಮಾರ್ ರೈ ಮುಳ್ಳೇರಿಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತೆ ವಿದ್ಯಾ ಗಣೇಶ್ ಅಣಂಗೂರು ನಿರೂಪಿಸಿದರು.ಕಾರ್ಯದರ್ಶಿ ಅಶೋಕ ಕುಮಾರ್ ಕೊಡ್ಲಮೊಗೆರು ಸ್ವಾಗತಿಸಿ ,ಸದಾಶಿವ ಬಾಲಮಿತ್ರ ವಂದಿಸಿದರು. ಕಾರ್ಯಕ್ರಮ ದಲ್ಲಿ ಕಿರುಚಿತ್ರ ತಂಡದ ಎಲ್ಲಾ ಸದಸ್ಯರನ್ನು ರಂಗಚೇತನ ಕಾಸರಗೋಡು ವತಿಯಿಂದ ಗೌರವಿಸಲಾಯಿತು. ಬಳಿಕ ಕಿರುಚಿತ್ರದ ಪ್ರದರ್ಶನ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

5 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

5 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago