Advertisement
ಕೃಷಿ

ಜಾನುವಾರುಗಳಲ್ಲಿ ಮತ್ತೆ ಕಾಣಿಸಿಕೊಂಡ ಚರ್ಮಗಂಟು ರೋಗ | ಎಚ್ಚರಿಕೆ ವಹಿಸಲು ಹೈನುಗಾರರಿಗೆ ಸೂಚನೆ |

Share

ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ. 

ಈ ರೋಗವು  ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.

ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago