ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ.
ಈ ರೋಗವು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.
ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…