ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ.
ಈ ರೋಗವು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.
ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…