ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ.
ಈ ರೋಗವು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.
ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…