Advertisement
ಕೃಷಿ

ಜಾನುವಾರುಗಳಲ್ಲಿ ಮತ್ತೆ ಕಾಣಿಸಿಕೊಂಡ ಚರ್ಮಗಂಟು ರೋಗ | ಎಚ್ಚರಿಕೆ ವಹಿಸಲು ಹೈನುಗಾರರಿಗೆ ಸೂಚನೆ |

Share

ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ. 

ಈ ರೋಗವು  ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.

ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 hour ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

2 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

2 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

12 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

13 hours ago