Advertisement
ಕೃಷಿ

ಜಾನುವಾರುಗಳಲ್ಲಿ ಮತ್ತೆ ಕಾಣಿಸಿಕೊಂಡ ಚರ್ಮಗಂಟು ರೋಗ | ಎಚ್ಚರಿಕೆ ವಹಿಸಲು ಹೈನುಗಾರರಿಗೆ ಸೂಚನೆ |

Share

ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ. 

Advertisement
Advertisement

ಈ ರೋಗವು  ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.

Advertisement

ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

13 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

19 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

20 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

3 days ago