ಮಳೆ ಹಾನಿ | ನೆರೆಹಾನಿಗೆ ತುರ್ತು 500 ಕೋಟಿ ರೂಪಾಯಿ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ |

July 13, 2022
7:04 PM

ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement
Advertisement

Advertisement

ಉಡುಪಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು. ನಂತರ  ಆಗಸ್ಟ್ ಸಮಯದಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು.  ಜಿಲ್ಲೆಗಳಿಂದ ವರದಿ ಹಾಗೂ ಅಂದಾಜು ಪಟ್ಟಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು. ಮಳೆಗೆ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಸೇರಿ ದಕ್ಷಿಣ ಕನ್ನಡ- 727 ಕಿ.ಮಿ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ, 2187 ಕಿ.ಮೀ ರಸ್ತೆ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.

ಕೊಡಗು ಹಾಗೂ ಕರಾವಳಿಯಲ್ಲಿ ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿಯಿಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದರು. ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ಷಯ ತೃತೀಯ : ಅನಂತ ಶುಭವನ್ನು ತರುವ ಹಬ್ಬ : ಚಿನ್ನ ಖರೀದಿಸುವುದೊಂದೆ ಅಕ್ಷಯ ತೃತೀಯ ಅಲ್ಲ
May 10, 2024
1:56 PM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ
May 10, 2024
1:28 PM
by: The Rural Mirror ಸುದ್ದಿಜಾಲ
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ
May 10, 2024
1:10 PM
by: The Rural Mirror ಸುದ್ದಿಜಾಲ
ಭಾರತೀಯ ಹಿಂದುಗಳಿಗೆ ಶಾಕಿಂಗ್‌ ಸುದ್ದಿ : ಭಾರತದಲ್ಲಿ ಹಿಂದೂಗಳ ಸಂಖ್ಯೆಯಲ್ಲಿ ಇಳಿಕೆ : ಅಲ್ಪ ಸಂಖ್ಯಾತ ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ
May 10, 2024
12:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror