ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು. ನಂತರ ಆಗಸ್ಟ್ ಸಮಯದಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು. ಜಿಲ್ಲೆಗಳಿಂದ ವರದಿ ಹಾಗೂ ಅಂದಾಜು ಪಟ್ಟಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು. ಮಳೆಗೆ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಸೇರಿ ದಕ್ಷಿಣ ಕನ್ನಡ- 727 ಕಿ.ಮಿ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ, 2187 ಕಿ.ಮೀ ರಸ್ತೆ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.
ಕೊಡಗು ಹಾಗೂ ಕರಾವಳಿಯಲ್ಲಿ ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿಯಿಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದರು. ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದರು.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490