ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು. ನಂತರ ಆಗಸ್ಟ್ ಸಮಯದಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು. ಜಿಲ್ಲೆಗಳಿಂದ ವರದಿ ಹಾಗೂ ಅಂದಾಜು ಪಟ್ಟಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು. ಮಳೆಗೆ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಸೇರಿ ದಕ್ಷಿಣ ಕನ್ನಡ- 727 ಕಿ.ಮಿ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ, 2187 ಕಿ.ಮೀ ರಸ್ತೆ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.
ಕೊಡಗು ಹಾಗೂ ಕರಾವಳಿಯಲ್ಲಿ ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿಯಿಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದರು. ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…