Advertisement
ರಾಜ್ಯ

ಮಳೆ ಹಾನಿ | ನೆರೆಹಾನಿಗೆ ತುರ್ತು 500 ಕೋಟಿ ರೂಪಾಯಿ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ |

Share

ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು. ನಂತರ  ಆಗಸ್ಟ್ ಸಮಯದಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು.  ಜಿಲ್ಲೆಗಳಿಂದ ವರದಿ ಹಾಗೂ ಅಂದಾಜು ಪಟ್ಟಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು. ಮಳೆಗೆ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಸೇರಿ ದಕ್ಷಿಣ ಕನ್ನಡ- 727 ಕಿ.ಮಿ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ, 2187 ಕಿ.ಮೀ ರಸ್ತೆ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.

ಕೊಡಗು ಹಾಗೂ ಕರಾವಳಿಯಲ್ಲಿ ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿಯಿಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದರು. ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

40 minutes ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

1 hour ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

7 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

8 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

9 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

10 hours ago