Advertisement
ಕೃಷಿ

ಏರಿಕೆಯಾದ ಪೊಟ್ಯಾಷ್ ರಸಗೊಬ್ಬರದ ದರ: ಕೃಷಿ ಇಲಾಖೆ

Share

ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಠ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ 1700. ದೇಶದಲ್ಲಿ ಶೇಕಡ 100ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದ ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ. ಮಾತ್ರವಲ್ಲ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ.

ಹೊಸ ಆಮದು ಬೆಲೆ, ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್‌ಗೆ ರೂ, 40.147 ಎಂದು ನಿಗಧಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು ಪ್ರತಿ ಟನ್ ಎಮ್.ಒ.ಪಿ ನೀಡುವ ರಿಯಾಯಿತು ದರ ರೂ. 6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ. 34,000 ಆಗುತ್ತದೆ. ಹಾಗಾಗಿ ಪ್ರತಿ ಚೀಲವು ದರವು ರೂ. 1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

23 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

24 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago