ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

July 7, 2026
8:33 PM
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು. ಚತುಷ್ಪಥ ಯೋಜನೆ ಹಾಗೂ ಮಂಗಳೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಗಳಿಗೆ ವೇಗ ನೀಡುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ.

ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ–275ರ ಮಾಣಿ–ಸಂಪಾಜೆ ರಸ್ತೆಯ ದುರಸ್ತಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ₹49.22 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರೊಂದಿಗೆ ಈ ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ರಸ್ತೆ ಮೂಲಸೌಕರ್ಯ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ ಸಂಸದರು, ಕರಾವಳಿ ಹಾಗೂ ಒಳನಾಡಿನ ನಡುವಿನ ಸಂಪರ್ಕ ಸುಧಾರಣೆಗೆ ಮಾಣಿ–ಸಂಪಾಜೆ ರಸ್ತೆ ಮೇಲ್ದರ್ಜೀಕರಣ ಅತ್ಯಂತ ಅಗತ್ಯ ಎಂದು ವಿವರಿಸಿದರು. ಈ ಯೋಜನೆಗೆ ಶೀಘ್ರದಲ್ಲೇ ಅಲೈನ್‌ಮೆಂಟ್ ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಒತ್ತಾಯಿಸಿದರು.

ಈ ರಸ್ತೆ ಅಭಿವೃದ್ಧಿಯಿಂದ ಸಂಚಾರ ಸುರಕ್ಷತೆ ಹೆಚ್ಚುವುದರ ಜೊತೆಗೆ ವಾಹನ ಸಂಚಾರ ಸುಗಮವಾಗಿ, ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಸಂಸದರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸಭೆಯಲ್ಲಿ ಮಂಗಳೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಯೋಜನೆಯ ಪ್ರಗತಿಯ ಬಗ್ಗೆಯೂ ಚರ್ಚೆ ನಡೆಯಿತು. ವಿಶೇಷವಾಗಿ ಶಿರಾಡಿ ಘಾಟ್ ವಿಭಾಗದ ಹೊಸ ರಸ್ತೆ ವಿನ್ಯಾಸಕ್ಕೆ ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿಯಿಂದ ಅನುಮೋದನೆ ದೊರೆತಿರುವುದನ್ನು ಸಂಸದರು ಸ್ವಾಗತಿಸಿದರು. ಪ್ರಸ್ತುತ ಯೋಜನೆಯ DPR ತಯಾರಿ ಹಂತದಲ್ಲಿದ್ದು, ಪರಿಸರ, ಅರಣ್ಯ ಹಾಗೂ ವನ್ಯಜೀವಿ ಇಲಾಖೆಗಳ ಅನುಮತಿ ಪ್ರಕ್ರಿಯೆಯೂ ಮುಂದುವರಿದಿದೆ.

ಭೇಟಿಯ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಬ್ರಿಜೇಶ್ ಚೌಟ ಅವರು, “ಹೆಚ್ಚಿನ ಜನರು ತಮ್ಮ ಊರಿಗೆ ಮರಳಬೇಕಾದರೆ ಮೊದಲು ವಿಶ್ವದರ್ಜೆಯ ರಸ್ತೆ ಸಂಪರ್ಕ ವ್ಯವಸ್ಥೆ ನಿರ್ಮಿಸಬೇಕು. ಉತ್ತಮ ರಸ್ತೆ ಸಂಪರ್ಕವು ಹೂಡಿಕೆ, ಉದ್ಯೋಗ ಹಾಗೂ ಆರ್ಥಿಕ ಅಭಿವೃದ್ಧಿಗೆ ದಾರಿಯಾಗುತ್ತದೆ. ಈ ಯೋಜನೆಗಳು ಪೂರ್ಣಗೊಳ್ಳುವವರೆಗೆ ನಾನು ನಿರಂತರವಾಗಿ ಶ್ರಮಿಸುತ್ತೇನೆ” ಎಂದು ಹೇಳಿದರು.

The Central Government has sanctioned ₹49.22 crore for repair works on the Maani–Sampaje stretch of NH-275 in Dakshina Kannada. MP Captain Brijesh Chowta also met the Ministry of Road Transport Secretary in New Delhi, urging speedy approval for the proposed four-laning project and reviewing progress on the Bengaluru–Mangaluru Expressway.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror