Advertisement
ಅನುಕ್ರಮ

ಮತ್ತೆ ನೆನಪಾದ ಮಾಡಂಗೋಲು

Share

ಸಂಚಾರಿಯಾಗಿದ್ದ ಮನುಜ ವಿಕಸನಗೊಳ್ಳುತ್ತಾ ಒಂದೆಡೆ ನೆಲೆ‌ನಿಲ್ಲಲಾರಂಭಿಸಿದ. ಅಲ್ಲೇ ಕೃಷಿ ಹಾಗೂ ಇನ್ನಿತರ ಚಟುವಟಿಕೆಗಳನ್ನು ಶುರು ಮಾಡಿದ. ಆರಂಭಿಕ ದಿನಗಳಲ್ಲಿ ಗುಹೆ ಮರದ ಪೊಟರೆಗಳಲ್ಲಿ ಮಳೆ ಬಿಸಿಲಿನಿಂದ ರಕ್ಷಣೆಗಾಗಿ ಆಶ್ರಯ ಪಡೆದ. ನಿಧಾನವಾಗಿ ಮನೆ ಕಟ್ಟುವ ನಿಟ್ಟಿನಲ್ಲಿ ಯೋಚಿಸಿರಬಹುದು. (ಬಹುಶಃ ಬೆಟ್ಟ ಗುಡ್ಡ ಮರಗಳಿಲ್ಲದ ಜಾಗಗಳಲ್ಲಿ) ಕೃಷಿ ಆರಂಭಿಸಿದಾಗ ಮಾಡಂಗೋಲಿನ ರೀತಿಯಲ್ಲಿ ಮನೆ‌ ನಿರ್ಮಿಸಿರಬಹುದು. ಪ್ರಯೋಗಪ್ರಿಯ ಮನುಜ ಒಂದೊಂದೇ ಆವಿಷ್ಕಾರಗಳನ್ನು ಮಾಡಿ ಇಂದಿನ ನವೀನ ತಂತ್ರಜ್ಞಾನಕ್ಕೆ ತೆರೆದುಕೊಂಡಾಗಿದೆ. ಆದರೆ ಮನದಲ್ಲಿ ಪರಿಸರಕ್ಕೆ ಹತ್ತಿರವಾಗುವುದೆಂದರೆ ಯಾವಾಗಲೂ ಇಷ್ಟವೇ. ಆದರೆ ಬಹಳ ಮುಂದುವರಿದ ಭ್ರಮೆಯಲ್ಲಿರುವ ನಮ್ಮನ್ನು ಕೋವಿಡ್ ಮತ್ತೆ ಪ್ರಕೃತಿಯ ಮಡಿಲಲ್ಲೇ ತಂದು ಕುಳ್ಳಿರಿಸಿದೆ. ಯಾವ ಹಳ್ಳಿ ಅಸಹನೀಯವೆನಿಸಿತ್ತೋ ಅದೇ ಪ್ರಿಯವಾಗಿದೆ. ಕಳೆಯೆಂದು ಕಿತ್ತು ಕಿತ್ತು ಬಿಸಾಡುತ್ತಿದ್ದ ಸೊಪ್ಪಿನ ಗಿಡಗಳನ್ನು ಕಷಾಯ ಮಾಡಿ ಇಮ್ಯುನಿಟಿ ಬೂಸ್ಟರ್ ಎಂದು ಸೇವಿಸುವಂತಾಗಿದೆ. ಇದೆಲ್ಲದರ ನಡುವೆ ಮತ್ತೊಂದು ವಿಷಯವೂ ಜನರನ್ನು ಬಹುವಾಗಿ ಸೆಳೆಯಿತು. ಅದುವೇ ಮಾಡಂಗೋಲು.

ಏನಿದು ಮಾಡಂಗೋಲು.? ಸುತ್ತ ಮುತ್ತ ಸಿಗುವ ಮಡಲು, ಹುಲ್ಲು, ಕೊತ್ತಳಿಗೆ, ಕಟ್ಟಿಗೆ, ಬಳ್ಳಿಗಳನ್ನು ಬಳಸಿ ಮಾಡುವ ಆಟದ (ಈಗ) ಮನೆಯೇ ಮಾಡಂಗೋಲು. ಹಿಂದೆ ಬೆಳೆಗಳ ರಕ್ಷಣೆಗಾಗಿ ಗದ್ದೆ, ತೋಟಗಳೆಡೆಯಲ್ಲಿ ರಾತ್ರಿ ಕಾವಲಿರುವ ಉದ್ದೇಶದಿಂದ ಈ ಮಾಡಂಗೋಲನ್ನು ಕಟ್ಟುತ್ತಿದ್ದರು. ಸೀಮಿತ ಉದ್ದೇಶವಿಟ್ಟುಕೊಂಡು ಕಟ್ಟುತ್ತಿದ್ದುದರಿಂದ ಪರಿಸರ ಸ್ನೇಹಿಯಾಗಿಯೇ ಇರುತ್ತಿತ್ತು. ಒಂದು ವೇಳೆ ಹಾನಿಯಾದರೆ ಮತ್ತೆ ಹೊಸದು ನಿರ್ಮಿಸಲು ಕಷ್ಟವೆನಿಸದು.

ಮಕ್ಕಳು ತಮ್ಮ ಬಾಲ್ಯದಲ್ಲೊಮ್ಮೆಯಾದರೂ ಮಾಡಂಗೋಲು ನಿರ್ಮಿಸುವ ಅನುಭವ ಪಡೆಯದಿದ್ದರೆ ಅದೊಂದು ಶೂನ್ಯವೇ ಸರಿ. ಲಾಕ್ ಡೌನ್ ನಲ್ಲಿ ದಿನಕ್ಕೊಂದು ಹೊಸತು ಮಾಡಿದರೂ ನಾಳೆ ಏನು ಮಾಡೋಣ ಎಂಬ ಮಕ್ಕಳ ಪ್ರಶ್ನೆಗೆ ಒಂದು ಸರ್ಪ್ರೈಸ್ ಉತ್ತರವಾಯಿತು ಮಾಡಂಗೋಲು ಎಂದು ಗೆಳತಿ ಸ್ವಾತಿ ಜಯಪ್ರಸಾದ್ ಆನೆಕ್ಕಾರ್ ತಮ್ಮ ಫೇಸ್‌ ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ. ಹೇಗೆ? ಏನು? ಎತ್ತ ಎಂಬ ಪ್ರಶ್ನೆಗೆ ಮಾಡಂಗೋಲು ನಿರ್ಮಿಸಿಯೇ ಮಕ್ಕಳಿಗೆ ಉತ್ತರಿಸಿದರು.
ಮಾಡಂಗೋಲಿನಲ್ಲಿನ ಎದುರು , ಒಳಗೆ ಕುಳಿತು, ನಿಂತು, ಸೆಲ್ಫಿ ಫೋಟೋಗಳನ್ನು ತೆಗೆದಾಯಿತು, ಸಂಭ್ರಮಿಸಿ ಗೆಳೆಯರ ಹೊಟ್ಟೆ ಉರಿಸಿಯೂ ಆಯಿತು.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ. ‌

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

4 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago