Advertisement
ಅನುಕ್ರಮ

ಮತ್ತೆ ನೆನಪಾದ ಮಾಡಂಗೋಲು

Share

ಸಂಚಾರಿಯಾಗಿದ್ದ ಮನುಜ ವಿಕಸನಗೊಳ್ಳುತ್ತಾ ಒಂದೆಡೆ ನೆಲೆ‌ನಿಲ್ಲಲಾರಂಭಿಸಿದ. ಅಲ್ಲೇ ಕೃಷಿ ಹಾಗೂ ಇನ್ನಿತರ ಚಟುವಟಿಕೆಗಳನ್ನು ಶುರು ಮಾಡಿದ. ಆರಂಭಿಕ ದಿನಗಳಲ್ಲಿ ಗುಹೆ ಮರದ ಪೊಟರೆಗಳಲ್ಲಿ ಮಳೆ ಬಿಸಿಲಿನಿಂದ ರಕ್ಷಣೆಗಾಗಿ ಆಶ್ರಯ ಪಡೆದ. ನಿಧಾನವಾಗಿ ಮನೆ ಕಟ್ಟುವ ನಿಟ್ಟಿನಲ್ಲಿ ಯೋಚಿಸಿರಬಹುದು. (ಬಹುಶಃ ಬೆಟ್ಟ ಗುಡ್ಡ ಮರಗಳಿಲ್ಲದ ಜಾಗಗಳಲ್ಲಿ) ಕೃಷಿ ಆರಂಭಿಸಿದಾಗ ಮಾಡಂಗೋಲಿನ ರೀತಿಯಲ್ಲಿ ಮನೆ‌ ನಿರ್ಮಿಸಿರಬಹುದು. ಪ್ರಯೋಗಪ್ರಿಯ ಮನುಜ ಒಂದೊಂದೇ ಆವಿಷ್ಕಾರಗಳನ್ನು ಮಾಡಿ ಇಂದಿನ ನವೀನ ತಂತ್ರಜ್ಞಾನಕ್ಕೆ ತೆರೆದುಕೊಂಡಾಗಿದೆ. ಆದರೆ ಮನದಲ್ಲಿ ಪರಿಸರಕ್ಕೆ ಹತ್ತಿರವಾಗುವುದೆಂದರೆ ಯಾವಾಗಲೂ ಇಷ್ಟವೇ. ಆದರೆ ಬಹಳ ಮುಂದುವರಿದ ಭ್ರಮೆಯಲ್ಲಿರುವ ನಮ್ಮನ್ನು ಕೋವಿಡ್ ಮತ್ತೆ ಪ್ರಕೃತಿಯ ಮಡಿಲಲ್ಲೇ ತಂದು ಕುಳ್ಳಿರಿಸಿದೆ. ಯಾವ ಹಳ್ಳಿ ಅಸಹನೀಯವೆನಿಸಿತ್ತೋ ಅದೇ ಪ್ರಿಯವಾಗಿದೆ. ಕಳೆಯೆಂದು ಕಿತ್ತು ಕಿತ್ತು ಬಿಸಾಡುತ್ತಿದ್ದ ಸೊಪ್ಪಿನ ಗಿಡಗಳನ್ನು ಕಷಾಯ ಮಾಡಿ ಇಮ್ಯುನಿಟಿ ಬೂಸ್ಟರ್ ಎಂದು ಸೇವಿಸುವಂತಾಗಿದೆ. ಇದೆಲ್ಲದರ ನಡುವೆ ಮತ್ತೊಂದು ವಿಷಯವೂ ಜನರನ್ನು ಬಹುವಾಗಿ ಸೆಳೆಯಿತು. ಅದುವೇ ಮಾಡಂಗೋಲು.

ಏನಿದು ಮಾಡಂಗೋಲು.? ಸುತ್ತ ಮುತ್ತ ಸಿಗುವ ಮಡಲು, ಹುಲ್ಲು, ಕೊತ್ತಳಿಗೆ, ಕಟ್ಟಿಗೆ, ಬಳ್ಳಿಗಳನ್ನು ಬಳಸಿ ಮಾಡುವ ಆಟದ (ಈಗ) ಮನೆಯೇ ಮಾಡಂಗೋಲು. ಹಿಂದೆ ಬೆಳೆಗಳ ರಕ್ಷಣೆಗಾಗಿ ಗದ್ದೆ, ತೋಟಗಳೆಡೆಯಲ್ಲಿ ರಾತ್ರಿ ಕಾವಲಿರುವ ಉದ್ದೇಶದಿಂದ ಈ ಮಾಡಂಗೋಲನ್ನು ಕಟ್ಟುತ್ತಿದ್ದರು. ಸೀಮಿತ ಉದ್ದೇಶವಿಟ್ಟುಕೊಂಡು ಕಟ್ಟುತ್ತಿದ್ದುದರಿಂದ ಪರಿಸರ ಸ್ನೇಹಿಯಾಗಿಯೇ ಇರುತ್ತಿತ್ತು. ಒಂದು ವೇಳೆ ಹಾನಿಯಾದರೆ ಮತ್ತೆ ಹೊಸದು ನಿರ್ಮಿಸಲು ಕಷ್ಟವೆನಿಸದು.

ಮಕ್ಕಳು ತಮ್ಮ ಬಾಲ್ಯದಲ್ಲೊಮ್ಮೆಯಾದರೂ ಮಾಡಂಗೋಲು ನಿರ್ಮಿಸುವ ಅನುಭವ ಪಡೆಯದಿದ್ದರೆ ಅದೊಂದು ಶೂನ್ಯವೇ ಸರಿ. ಲಾಕ್ ಡೌನ್ ನಲ್ಲಿ ದಿನಕ್ಕೊಂದು ಹೊಸತು ಮಾಡಿದರೂ ನಾಳೆ ಏನು ಮಾಡೋಣ ಎಂಬ ಮಕ್ಕಳ ಪ್ರಶ್ನೆಗೆ ಒಂದು ಸರ್ಪ್ರೈಸ್ ಉತ್ತರವಾಯಿತು ಮಾಡಂಗೋಲು ಎಂದು ಗೆಳತಿ ಸ್ವಾತಿ ಜಯಪ್ರಸಾದ್ ಆನೆಕ್ಕಾರ್ ತಮ್ಮ ಫೇಸ್‌ ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ. ಹೇಗೆ? ಏನು? ಎತ್ತ ಎಂಬ ಪ್ರಶ್ನೆಗೆ ಮಾಡಂಗೋಲು ನಿರ್ಮಿಸಿಯೇ ಮಕ್ಕಳಿಗೆ ಉತ್ತರಿಸಿದರು.
ಮಾಡಂಗೋಲಿನಲ್ಲಿನ ಎದುರು , ಒಳಗೆ ಕುಳಿತು, ನಿಂತು, ಸೆಲ್ಫಿ ಫೋಟೋಗಳನ್ನು ತೆಗೆದಾಯಿತು, ಸಂಭ್ರಮಿಸಿ ಗೆಳೆಯರ ಹೊಟ್ಟೆ ಉರಿಸಿಯೂ ಆಯಿತು.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ. ‌

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

13 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

14 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

14 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

18 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago