ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರಯಾಗ್ರಾಜ್ಗೆ ಆಗಮಿಸಿದ್ದಾರೆ. ನಿನ್ನೆ ಸಹ ಕೋಟ್ಯಂತರ ಶ್ರದ್ಧಾಳುಗಳು ಪುಣ್ಯಸ್ನಾನದಲ್ಲಿ ಭಾಗಿಯಾದರು. ಈಗಾಗಲೇ 60 ಕೋಟಿಗೂ ಅಧಿಕ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದಿದ್ದಾರೆ. ಕುಂಭಮೇಳದಲ್ಲಿ ಭಾಗಿಯಾಗುವ ಭಕ್ತರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 15 ಸಾವಿರಕ್ಕೂ ಅಧಿಕ ಕಾರ್ಮಿಕರು ನೈರ್ಮಲ್ಯ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ವಿಶ್ವದಾಖಲೆ ಸೃಷ್ಟಿಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವ ಕುರಿತು ಪುಣ್ಯಸ್ನಾನದಲ್ಲಿ ಭಾಗಿಯಾದ ಯಾತ್ರಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel