ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ಉತ್ತರ ಪ್ರದೇಶದ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ತ್ರಿವೇಣಿ ಸಂಗಮದಲ್ಲಿ ಇಂದು 30.47 ಲಕ್ಷಕ್ಕೂ ಹೆಚ್ಚು ಭಕ್ತರು ಮತ್ತು ಇಲ್ಲಿಯವರೆಗೆ 9.24 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳಕ್ಕೆ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಿಂದ 150ಕ್ಕೂ ಹೆಚ್ಚು ವಿಶೇಷ ರೈಲು ಸಂಚಾರವನ್ನು ಆರಂಭಿಸಲಾಗಿದೆ. ಇದೇ 29 ರಂದು ಮೌನಿ ಅಮವಾಸ್ಯೆ ಇರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೆಚ್ಚು ಭಕ್ತರು ಕುಂಭಮೇಳಕ್ಕೆ ಬರುವ ಸಾಧ್ಯತೆಗಳನ್ನು ಗಮನಿಸಿ ಈ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ. ಮೌನಿ ಅಮವಾಸ್ಯೆ ಸಂದರ್ಭದಲ್ಲಿ 10 ಕೋಟಿಗೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಒಟ್ಟಾರೆ 400ಕ್ಕೂ ಹೆಚ್ಚು ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…