MIRROR FOCUS

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಳೆ ದೇಶಾದ್ಯಂತ ಶಿವರಾತ್ರಿ ಸಂಭ್ರಮ. ಶಿವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಪ್ರತೀ ವ್ಯಕ್ತಿಯಲ್ಲೂ ಶಿವೋಹಂ ಶಿವೋಹಂ ಜಪ ನಡೆಯುತ್ತದೆ.………ಮುಂದೆ ಓದಿ……..

Advertisement

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಹತ್ವದ ದಿನ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ದಿನ. ಈ ದಿನ ಶಿವನನ್ನು ಪೂಜಿಸಿದರೆ, ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ನಂಬಿಕೆ.ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಹೇಳಿದ್ದಾನೆ ಎನ್ನುತ್ತದೆ ಶಿವಪುರಾಣ. ಮಹಾ ಶಿವರಾತ್ರಿಯಂದು ಬಿಲ್ವಪತ್ರೆಯನ್ನು ಶಿವಲಿಂಗದ ಮೇಲಿಟ್ಟು ಪೂಜಿಸಿದರೆ, ಯಾಗ ಮಾಡಿದ ಫಲ ದೊರೆಯುತ್ತದೆ ಎಂಬುದೂ ನಂಬಿಕೆ.

Advertisement

ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ.  ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ.

ಈ ಎಲ್ಲಾ ಧಾರ್ಮಿಕ ನಂಬಿಕೆಗಳ ಜೊತೆಗೆ ಶಿವಭಕ್ತರು ಶಿವಾರ್ಪಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.  ಮಹಾಶಿವರಾತ್ರಿ ಅಂಗವಾಗಿ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾರೆ. ಮೈಸೂರಿನ ನಂಜನಗೂಡು ಹಾಗೂ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲೂ ಶಿವರಾತ್ರಿ ಜಾಗರಣೆ ನಡೆಯಲಿದೆ. ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗೋಕರ್ಣ ಮತ್ತು ಮುರುಡೇಶ್ವರದಲ್ಲಿ ನಾಳೆ ಅಹೋರಾತ್ರಿ ಜಾಗರಣೋತ್ಸವಕ್ಕೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.  ಮಹಾಶಿವರಾತ್ರಿಯಂದು  ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಪ್ರಸಿದ್ದ ನಂದಿಯ ಭೋಗನಂದೀಶ್ವರ ದೇವಾಲಯ ಹಾಗೂ ನಂದಿಬೆಟ್ಟದ ಯೋಗ ನಂದೀಶ್ವರ ದೇವಾಲಯದಲ್ಲಿ ವಿಶೇಷಪೂಜೆ, ನಡೆಯಲಿದೆ.  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೈವಾರದ ಶ್ರೀ ಯೋಗಿ ನಾರಾಯಣ ಯತೀಂದ್ರರ ಮಠದಲ್ಲಿ ನಾಳೆ ಹರಿಕಥೆ ಹಮ್ಮಿಕೊಳ್ಳಲಾಗಿದೆ. ದೇವಾಲಯದಲ್ಲಿ ಮಹಾಶಿವಲಿಂಗ ದರ್ಶನವನ್ನು ಏರ್ಪಡಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿಜದ ಹಣವ ಕಟ್ಟಿದರೆ ದಕ್ಕೀತೇ ಕನಸಿನ ಹಣದ ಬುಟ್ಟಿ

ಪ್ರಧಾನಿ ನರೇಂದ್ರ ಮೋದಿಯವರು, ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್, ಉದ್ಯಮಿ ಮುಖೇಶ್…

20 minutes ago

ಪಂಜದಲ್ಲಿ ಜನರೇಟರ್ ಕ್ಯಾಂಪ್ | ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್…

32 minutes ago

ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ

ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…

38 minutes ago

ಮುಂದುವರಿದ ಮಳೆ ಆತಂಕ | ರಾಜ್ಯದಲ್ಲೂ ನಿರಂತರ ಮಳೆ | ಜನಜೀವನ ಅಸ್ತವ್ಯಸ್ತ

ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…

44 minutes ago

ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…

1 hour ago

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…

5 hours ago