Advertisement
MIRROR FOCUS

#ಶಿವರಾತ್ರಿ | ಮಹಾಶಿವರಾತ್ರಿ | ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ …|

Share

ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಅದರ ದರ್ಶನ ಪಡೆಯಬೇಕು. ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ ರಜ-ತಮ ಕಣಗಳ ವಿಘಟನೆಯಾಗಿ ವ್ಯಕ್ತಿಯ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಇದರಿಂದ ವ್ಯಕ್ತಿಗೆ ಶಿವಲಿಂಗದಿಂದ ಹೊರ ಬೀಳುವ ಶಕ್ತಿಶಾಲಿ ಲಹರಿಗಳನ್ನು ಸಹಿಸಲು ಸಾಧ್ಯವಾಗುತ್ತದೆ. ನಂದಿಯ ಕೊಂಬುಗಳಿಂದ ದರ್ಶನವನ್ನು ಪಡೆದುಕೊಳ್ಳದೇ ನೇರವಾಗಿ ಶಿವನ ದರ್ಶನವನ್ನು ಪಡೆದುಕೊಂಡರೆ ತೇಜಲಹರಿಗಳ ಆಘಾತದಿಂದ ಶರೀರದಲ್ಲಿ ಉಷ್ಣತೆ ನಿರ್ಮಾಣವಾಗುವುದು, ತಲೆ ಭಾರವಾಗುವುದು, ಶರೀರ ಅಕಸ್ಮಾತ್ತಾಗಿ ಕಂಪಿಸುವುದು ಮುಂತಾದ ತೊಂದರೆಗಳಾಗಬಹುದು.

ಶೃಂಗದರ್ಶನದ ಮಹತ್ವವೇನು ? : ‘ಶೃಂಗದರ್ಶನ’ ಎಂದರೆ ನಂದಿಯ ಕೊಂಬುಗಳ ಮೂಲಕ ಶಿವಲಿಂಗವನ್ನು ನೋಡುವುದು.  ಶೃಂಗದರ್ಶನದ ಯೋಗ್ಯ ಪದ್ಧತಿ

ವಾಮಹಸ್ತಿ ವೃಷಣ ಧರೋನಿ|
ತರ್ಜನಿ ಅಂಗುಷ್ಠ ಶೃಂಗೀ ಠೆವೋನಿ|| – ಶ್ರೀಗುರುಚರಿತ್ರೆ

ಅರ್ಥ: 1. ನಂದಿಯ ಬಲಬದಿಗೆ ಕುಳಿತುಕೊಂಡು ಅಥವಾ ನಿಂತುಕೊಂಡು ಎಡಗೈಯನ್ನು ನಂದಿಯ ವೃಷಣದ ಮೇಲಿಡಬೇಕು.
2. ಬಲಗೈಯ ತರ್ಜನಿ (ಹೆಬ್ಬೆರಳಿನ ಸಮೀಪದ ಬೆರಳು) ಮತ್ತು ಹೆಬ್ಬೆರಳನ್ನು ನಂದಿಯ ಎರಡು ಕೊಂಬುಗಳ ಮೇಲಿಡಬೇಕು.
ಎರಡು ಕೊಂಬುಗಳು ಮತ್ತು ಅದರ ಮೇಲಿರಿಸಿದ ಎರಡು ಬೆರಳುಗಳ ನಡುವಿನ ಖಾಲಿ ಜಾಗದಿಂದ ಶಿವಲಿಂಗದ ದರ್ಶನವನ್ನು ಪಡೆದುಕೊಳ್ಳಬೇಕು.

ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಶಿವಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತುಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಯಲ್ಲಿ ನಿಂತುಕೊಳ್ಳಬೇಕು.

ಶಿವಲಿಂಗದಿಂದ ಬರುವ ಶಕ್ತಿಶಾಲಿ ಸಾತ್ತ್ವಿಕ ಲಹರಿಗಳು ಮೊದಲು ನಂದಿಯ ಕಡೆಗೆ ಆಕರ್ಷಿತವಾಗಿ ನಂತರ ನಂದಿಯಿಂದ ವಾತಾವರಣದಲ್ಲಿ ಪ್ರಕ್ಷೇಪಿತವಾಗುತ್ತಿರುತ್ತವೆ. ನಂದಿಯ ವೈಶಿಷ್ಟ್ಯವೇನೆಂದರೆ ನಂದಿಯಿಂದ ಈ ಲಹರಿಗಳು ಆವಶ್ಯಕತೆಗನುಸಾರವಾಗಿಯೇ ಪ್ರಕ್ಷೇಪಿತವಾಗುತ್ತಿರುತ್ತವೆ. ಇದರಿಂದ ಶಿವಲಿಂಗದ ದರ್ಶನವನ್ನು ಪಡೆಯುವವರಿಗೆ ಲಹರಿಗಳು ಶಿವನಿಂದ ನೇರವಾಗಿ ಸಿಗುವುದಿಲ್ಲ; ಇದರಿಂದ ಅವರಿಗೆ ಶಿವನಿಂದ ಬರುವ ಶಕ್ತಿಶಾಲಿ ಲಹರಿಗಳಿಂದ ತೊಂದರೆಯಾಗುವುದಿಲ್ಲ. ಇಲ್ಲಿ ಗಮನದಲ್ಲಿಡಬೇಕಾದ ಮಹತ್ವದ ಸಂಗತಿಯೇನೆಂದರೆ ಶಿವನಿಂದ ಬರುವ ಲಹರಿಗಳು ಸಾತ್ತ್ವಿಕವೇ ಆಗಿದ್ದರೂ ಸಾಮಾನ್ಯ ವ್ಯಕ್ತಿಗಳ ಆಧ್ಯಾತ್ಮಿಕ ಮಟ್ಟವು ಹೆಚ್ಚಿಗೆ ಇಲ್ಲದ ಕಾರಣ ಆ ಸಾತ್ತ್ವಿಕ ಲಹರಿಗಳನ್ನು ಸಹಿಸಿಕೊಳ್ಳುವ ಕ್ಷಮತೆಯು ಅವರಲ್ಲಿರುವುದಿಲ್ಲ. ಆದುದರಿಂದ ಈ ಲಹರಿಗಳಿಂದ ಅವರಿಗೆ ತೊಂದರೆಯಾಗುವ ಸಾಧ್ಯತೆಯಿರುತ್ತದೆ. ಆದುದರಿಂದ ಸಾಮಾನ್ಯ ವ್ಯಕ್ತಿಗಳು ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತು ಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಗೆ ನಿಂತು ಕೊಳ್ಳಬೇಕು.

ಶೇ. 5೦ ಕ್ಕಿಂತಲೂ ಹೆಚ್ಚಿನ ಆಧ್ಯಾತ್ಮಿಕ ಮಟ್ಟವಿರುವ ಭಕ್ತರಲ್ಲಿ ದೇವತೆಗಳಿಂದ ಬರುವ ಸಾತ್ತ್ವಿಕ ಲಹರಿಗಳನ್ನು ಸಹಿಸುವ ಕ್ಷಮತೆಯಿರುತ್ತದೆ, ಆದುದರಿಂದ ಅವರಿಗೆ ಆ ಲಹರಿಗಳಿಂದ ತೊಂದರೆಯಾಗುವುದಿಲ್ಲ. ಇಂತಹ ಭಕ್ತರು ದೇವತೆಯ ದರ್ಶನವನ್ನು ಎದುರಿನಿಂದಲೇ ಪಡೆದುಕೊಳ್ಳಬೇಕು. ಅವರಿಗೆ ದೇವತೆಗಳಿಂದ ಪ್ರಕ್ಷೇಪಿತವಾಗುವ ಲಹರಿಗಳನ್ನು ಸಹಜವಾಗಿ ಗ್ರಹಿಸಲು ಸಾಧ್ಯವಾಗುತ್ತದೆ.

(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಶಿವ’)
ವಿನೋದ ಕಾಮತ್,
ವಕ್ತಾರರು, ಸನಾತನ ಸಂಸ್ಥೆ
ಸಂಪರ್ಕ : 9342599299

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

4 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

9 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

10 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago