ಈ ಬಾರಿ ನಾಡಹಬ್ಬ ದಸರಾವನ್ನು(Dasara) ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. 2 ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ದಸರಾ ಉದ್ಘಾಟನೆಯ ನಂತರ ಚಾಮುಂಡಿ ಬೆಟ್ಟದಿಂದ ಅರಮನೆಗೆ ಬರುವಂತೆ ಆಹ್ವಾನಿಸುವ ಬಗ್ಗೆ ರಾಜಮಾತೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಯದುವೀರ್ ತಿಳಿಸಿದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…