ಈ ಬಾರಿ ನಾಡಹಬ್ಬ ದಸರಾವನ್ನು(Dasara) ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. 2 ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ದಸರಾ ಉದ್ಘಾಟನೆಯ ನಂತರ ಚಾಮುಂಡಿ ಬೆಟ್ಟದಿಂದ ಅರಮನೆಗೆ ಬರುವಂತೆ ಆಹ್ವಾನಿಸುವ ಬಗ್ಗೆ ರಾಜಮಾತೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಯದುವೀರ್ ತಿಳಿಸಿದರು.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…