ಈ ಬಾರಿ ನಾಡಹಬ್ಬ ದಸರಾವನ್ನು(Dasara) ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. 2 ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ದಸರಾ ಉದ್ಘಾಟನೆಯ ನಂತರ ಚಾಮುಂಡಿ ಬೆಟ್ಟದಿಂದ ಅರಮನೆಗೆ ಬರುವಂತೆ ಆಹ್ವಾನಿಸುವ ಬಗ್ಗೆ ರಾಜಮಾತೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಯದುವೀರ್ ತಿಳಿಸಿದರು.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…