ಈ ಬಾರಿ ನಾಡಹಬ್ಬ ದಸರಾವನ್ನು(Dasara) ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. 2 ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ದಸರಾ ಉದ್ಘಾಟನೆಯ ನಂತರ ಚಾಮುಂಡಿ ಬೆಟ್ಟದಿಂದ ಅರಮನೆಗೆ ಬರುವಂತೆ ಆಹ್ವಾನಿಸುವ ಬಗ್ಗೆ ರಾಜಮಾತೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಯದುವೀರ್ ತಿಳಿಸಿದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…