Advertisement
MIRROR FOCUS

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

Share

ಮಹಾರಾಷ್ಟ್ರದಲ್ಲಿ ಎಫ್‌ಡಿಎ (Food and Drug Administration) ಅಧಿಕಾರಿಗಳು ಅಡಿಕೆ ಸಾಗಾಟದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಡಿಕೆ ವಲಯದಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದ ಮೂಲಕ ಸಾಗುವ ಅಡಿಕೆ ಸರಕುಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿರುವುದು ಹಾಗೂ ವಾಹನ ಜಪ್ತಿ ಮಾಡುವ ಕ್ರಮಗಳು ನಡೆಯುತ್ತಿರುವ ವರದಿಗಳ ಬೆನ್ನಲ್ಲೇ ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ತುರ್ತು ಸಭೆಯನ್ನು ಕರೆದಿದೆ.

ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ಜೂನ್ 22 ರಂದು ಮಧ್ಯಾಹ್ನ 3.30ಕ್ಕೆ ಭೀಮಸಮುದ್ರದ ಎಪಿಎಂಸಿ ಆವರಣದಲ್ಲಿ ತುರ್ತು ಸಭೆ ನಡೆಯಲಿದೆ. ಸಭೆಯಲ್ಲಿ ಅಡಿಕೆ ವ್ಯಾಪಾರಿಗಳು, ಸಂಸ್ಕರಣಾ ಘಟಕಗಳ ಪ್ರತಿನಿಧಿಗಳು ಹಾಗೂ ಅಡಿಕೆ ಉದ್ಯಮಕ್ಕೆ ಸಂಬಂಧಿಸಿದ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ.

ಮಹಾರಾಷ್ಟ್ರ ಎಫ್‌ಡಿಎ ಆಯುಕ್ತ ತುಕಾರಾಂ ಮುಂಡೆ ಅವರ ಹೇಳಿಕೆಯನ್ನು ಉಲ್ಲೇಖಿಸಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ನಿಷೇಧಿತ ಅಥವಾ ಕಾನೂನುಬಾಹಿರ ಉತ್ಪನ್ನಗಳ ತಯಾರಿಕೆ, ವ್ಯಾಪಾರ ಅಥವಾ ಸಾಗಾಟಕ್ಕೆ ಬಳಸುವ ಸರಕುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ” ಕಳಪೆ ಅಡಿಕೆ ” ಸರಕುಗಳನ್ನೂ ಪರಿಗಣಿಸಲಾಗುತ್ತಿದೆ ಎಂಬ ಮಾಹಿತಿ ಅಡಿಕೆ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಇಂತಹ ಸರಕುಗಳನ್ನು ಸಾಗಿಸುತ್ತಿರುವ ವಾಹನಗಳು ಪತ್ತೆಯಾದರೆ ಸರಕು ಮತ್ತು ವಾಹನ ಎರಡನ್ನೂ ಜಪ್ತಿ ಮಾಡುವ ಸಾಧ್ಯತೆ ಇದೆ. ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೆ ಸರಕುಗಳು ದೀರ್ಘಕಾಲ ಜಪ್ತಿಯಲ್ಲಿರಬಹುದು. ಇದರಿಂದ ರೈತರು, ವ್ಯಾಪಾರಿಗಳು, ಸಂಸ್ಕರಣಾ ಘಟಕಗಳು ಮತ್ತು ಸಾರಿಗೆದಾರರಿಗೆ ಆರ್ಥಿಕ ಹೊರೆ ಉಂಟಾಗುವ ಆತಂಕ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಅಡಿಕೆ ಉದ್ಯಮದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಮಧ್ಯಪ್ರವೇಶ ಕೋರಿ ಚರ್ಚೆ ನಡೆಸಲು ಹಾಗೂ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ತುರ್ತು ಸಭೆ ಕರೆಯಲಾಗಿದೆ. ಅಡಿಕೆ ವಲಯಕ್ಕೆ ಸಂಬಂಧಿಸಿದ ಎಲ್ಲರೂ ಸಭೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka Areca Chamber of Commerce has convened an emergency meeting on June 22, 2026, following concerns over Maharashtra FDA actions against the transportation of prohibited goods, including rejected arecanut consignments. Traders fear vehicle seizures, legal complications and financial losses, prompting industry representatives to discuss collective action and seek government intervention.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

6 hours ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

6 hours ago

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…

7 hours ago

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

7 hours ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

9 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

22 hours ago