Advertisement
MIRROR FOCUS

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

Share

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾಂಪ್ಟಿ ಪ್ರದೇಶದಲ್ಲಿ ಆಹಾರ ಮತ್ತು ಔಷಧ ಆಡಳಿತ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 29 ಟನ್‌ಗಳಷ್ಟು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳಿಗೆ ಅಕ್ರಮ ವ್ಯಾಪಾರದ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ  ಕೋಲ್ಡ್ ಸ್ಟೋರೇಜ್‌ ಗೆ ಒಂದಕ್ಕೆ ದಾಳಿ ನಡೆಸಲಾಗಿದ್ದು, ಸುಮಾರು ₹1.11 ಕೋಟಿ ಮೌಲ್ಯದ ಸುಪಾರಿ ಸಂಗ್ರಹ ಪತ್ತೆಯಾಗಿದೆ. ತನಿಖೆ ಮುಂದುವರಿದಿದ್ದು, ಅಡಿಕೆಯ ಗುಣಮಟ್ಟ, ಸುರಕ್ಷತೆ ಹಾಗೂ ಕಾನೂನುಬದ್ಧ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಮಹಾರಾಷ್ಟ್ರ ರಾಜ್ಯಾದ್ಯಂತ FDA ನಡೆಸುತ್ತಿರುವ ಅಕ್ರಮ ಗುಟ್ಕಾ, ಪಾನ್ ಮಸಾಲಾ, ಸುಪಾರಿ ಹಾಗೂ ಇತರೆ ಆಹಾರ ಉತ್ಪನ್ನಗಳ ವಿರುದ್ಧದ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಈ ದಾಳಿ ನಡೆದಿದ್ದು, ನಾಗ್ಪುರ ವಿಭಾಗದಲ್ಲೇ ಸಾವಿರಾರು ಕಿಲೋಗಳಷ್ಟು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಘಟನೆ ಅಡಿಕೆ ಮತ್ತು ಸುಪಾರಿ ವ್ಯಾಪಾರದಲ್ಲಿ ಗುಣಮಟ್ಟದ ನಿಯಂತ್ರಣ, ಆಹಾರ ಸುರಕ್ಷತೆ ಹಾಗೂ ಕಾನೂನುಬದ್ಧ ಸಾಗಾಟದ ಮಹತ್ವವನ್ನು ತಿಳಿಸಿದೆ. FDA ಅಧಿಕಾರಿಗಳು ಮಹಾರಾಷ್ಟ್ರದಾದ್ಯಂತ ಇಂತಹ ತಪಾಸಣೆಗಳನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ತಿಳಿಸಿದ್ದಾರೆ.

ಅಡಿಕೆ ಬೆಳೆಗಾರರಿಗೆ ಏನು ಪ್ರಯೋಜನ ಇದರಿಂದ..? : ಮಹಾರಾಷ್ಟ್ರದ ನಾಗ್ಪುರದಲ್ಲಿ FDA ಹಾಗೂ ಪೊಲೀಸರು ₹1.11 ಕೋಟಿ ಮೌಲ್ಯದ ಸುಪಾರಿ ವಶಪಡಿಸಿಕೊಂಡಿರುವುದು ಕೇವಲ ಕಾನೂನು ಜಾರಿ ಕ್ರಮವಲ್ಲ, ಇದು ಅಡಿಕೆ ಮಾರುಕಟ್ಟೆಯ ಮೇಲೂ ಕೆಲವು ಪರೋಕ್ಷ ಪರಿಣಾಮಗಳನ್ನು ಉಂಟುಮಾಡಬಹುದು.ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಾರುಕಟ್ಟೆಯಲ್ಲಿ ಕೆಲವೊಮ್ಮೆ ದಾಖಲೆಗಳಿಲ್ಲದೆ ಸಾಗಾಟವಾಗುವ ಅಥವಾ ಗುಣಮಟ್ಟ ಪರಿಶೀಲನೆ ಇಲ್ಲದ ಅಡಿಕೆ ಮಾರಾಟವಾಗುತ್ತದೆ. ಇಂತಹ ಅಕ್ರಮ ದಾಸ್ತಾನುಗಳ ಮೇಲೆ ಕ್ರಮ ಕೈಗೊಳ್ಳುವುದರಿಂದ ಕಾನೂನುಬದ್ಧವಾಗಿ ಉತ್ಪಾದನೆ ಮಾಡಿ ಮಾರಾಟ ಮಾಡುವ ರೈತರಿಗೆ ಅನುಕೂಲವಾಗುತ್ತದೆ. ಕಳಪೆ ಗುಣಮಟ್ಟದ ಅಡಿಕೆ ದಾಸ್ತಾನು ನಿಯಂತ್ರಣವಿಲ್ಲದ ಪ್ರಮಾಣದಲ್ಲಿ ಇದ್ದರೆ ಅಡಿಕೆ ಮಾರುಕಟ್ಟೆ ಮೇಲೆ ದಿಢೀರನೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕಾನೂನು ಕ್ರಮ ಅನಿವಾರ್ಯವಾಗಿದೆ.  ಹಾಗೆಂದು ಈ ಒಂದು ದಾಳಿಯಿಂದಲೇ ಅಡಿಕೆ ಬೆಲೆ ಏರಿಕೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅಡಿಕೆ ಬೆಲೆಯ ಮೇಲೆ ಪರೋಕ್ಷವಾಗಿ ಧನಾತ್ಮಕ ಪರಿಣಾಮ ಬೀರುವ ನಿರೀಕ್ಷೆ ಇದೆ.

A joint operation by Maharashtra FDA and police in Kamptee, Nagpur, led to the seizure of around 29 tonnes of supari worth approximately ₹1.11 crore from a cold storage facility. The raid was part of a wider statewide crackdown on illegal and unsafe food products, including gutkha, pan masala and unapproved supari stocks.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

3 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

13 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago