Advertisement
MIRROR FOCUS

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

Share

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾಂಪ್ಟಿ ಪ್ರದೇಶದಲ್ಲಿ ಆಹಾರ ಮತ್ತು ಔಷಧ ಆಡಳಿತ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 29 ಟನ್‌ಗಳಷ್ಟು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳಿಗೆ ಅಕ್ರಮ ವ್ಯಾಪಾರದ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ  ಕೋಲ್ಡ್ ಸ್ಟೋರೇಜ್‌ ಗೆ ಒಂದಕ್ಕೆ ದಾಳಿ ನಡೆಸಲಾಗಿದ್ದು, ಸುಮಾರು ₹1.11 ಕೋಟಿ ಮೌಲ್ಯದ ಸುಪಾರಿ ಸಂಗ್ರಹ ಪತ್ತೆಯಾಗಿದೆ. ತನಿಖೆ ಮುಂದುವರಿದಿದ್ದು, ಅಡಿಕೆಯ ಗುಣಮಟ್ಟ, ಸುರಕ್ಷತೆ ಹಾಗೂ ಕಾನೂನುಬದ್ಧ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಮಹಾರಾಷ್ಟ್ರ ರಾಜ್ಯಾದ್ಯಂತ FDA ನಡೆಸುತ್ತಿರುವ ಅಕ್ರಮ ಗುಟ್ಕಾ, ಪಾನ್ ಮಸಾಲಾ, ಸುಪಾರಿ ಹಾಗೂ ಇತರೆ ಆಹಾರ ಉತ್ಪನ್ನಗಳ ವಿರುದ್ಧದ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಈ ದಾಳಿ ನಡೆದಿದ್ದು, ನಾಗ್ಪುರ ವಿಭಾಗದಲ್ಲೇ ಸಾವಿರಾರು ಕಿಲೋಗಳಷ್ಟು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಘಟನೆ ಅಡಿಕೆ ಮತ್ತು ಸುಪಾರಿ ವ್ಯಾಪಾರದಲ್ಲಿ ಗುಣಮಟ್ಟದ ನಿಯಂತ್ರಣ, ಆಹಾರ ಸುರಕ್ಷತೆ ಹಾಗೂ ಕಾನೂನುಬದ್ಧ ಸಾಗಾಟದ ಮಹತ್ವವನ್ನು ತಿಳಿಸಿದೆ. FDA ಅಧಿಕಾರಿಗಳು ಮಹಾರಾಷ್ಟ್ರದಾದ್ಯಂತ ಇಂತಹ ತಪಾಸಣೆಗಳನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ತಿಳಿಸಿದ್ದಾರೆ.

ಅಡಿಕೆ ಬೆಳೆಗಾರರಿಗೆ ಏನು ಪ್ರಯೋಜನ ಇದರಿಂದ..? : ಮಹಾರಾಷ್ಟ್ರದ ನಾಗ್ಪುರದಲ್ಲಿ FDA ಹಾಗೂ ಪೊಲೀಸರು ₹1.11 ಕೋಟಿ ಮೌಲ್ಯದ ಸುಪಾರಿ ವಶಪಡಿಸಿಕೊಂಡಿರುವುದು ಕೇವಲ ಕಾನೂನು ಜಾರಿ ಕ್ರಮವಲ್ಲ, ಇದು ಅಡಿಕೆ ಮಾರುಕಟ್ಟೆಯ ಮೇಲೂ ಕೆಲವು ಪರೋಕ್ಷ ಪರಿಣಾಮಗಳನ್ನು ಉಂಟುಮಾಡಬಹುದು.ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಾರುಕಟ್ಟೆಯಲ್ಲಿ ಕೆಲವೊಮ್ಮೆ ದಾಖಲೆಗಳಿಲ್ಲದೆ ಸಾಗಾಟವಾಗುವ ಅಥವಾ ಗುಣಮಟ್ಟ ಪರಿಶೀಲನೆ ಇಲ್ಲದ ಅಡಿಕೆ ಮಾರಾಟವಾಗುತ್ತದೆ. ಇಂತಹ ಅಕ್ರಮ ದಾಸ್ತಾನುಗಳ ಮೇಲೆ ಕ್ರಮ ಕೈಗೊಳ್ಳುವುದರಿಂದ ಕಾನೂನುಬದ್ಧವಾಗಿ ಉತ್ಪಾದನೆ ಮಾಡಿ ಮಾರಾಟ ಮಾಡುವ ರೈತರಿಗೆ ಅನುಕೂಲವಾಗುತ್ತದೆ. ಕಳಪೆ ಗುಣಮಟ್ಟದ ಅಡಿಕೆ ದಾಸ್ತಾನು ನಿಯಂತ್ರಣವಿಲ್ಲದ ಪ್ರಮಾಣದಲ್ಲಿ ಇದ್ದರೆ ಅಡಿಕೆ ಮಾರುಕಟ್ಟೆ ಮೇಲೆ ದಿಢೀರನೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕಾನೂನು ಕ್ರಮ ಅನಿವಾರ್ಯವಾಗಿದೆ.  ಹಾಗೆಂದು ಈ ಒಂದು ದಾಳಿಯಿಂದಲೇ ಅಡಿಕೆ ಬೆಲೆ ಏರಿಕೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅಡಿಕೆ ಬೆಲೆಯ ಮೇಲೆ ಪರೋಕ್ಷವಾಗಿ ಧನಾತ್ಮಕ ಪರಿಣಾಮ ಬೀರುವ ನಿರೀಕ್ಷೆ ಇದೆ.

A joint operation by Maharashtra FDA and police in Kamptee, Nagpur, led to the seizure of around 29 tonnes of supari worth approximately ₹1.11 crore from a cold storage facility. The raid was part of a wider statewide crackdown on illegal and unsafe food products, including gutkha, pan masala and unapproved supari stocks.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…

2 hours ago

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

5 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

6 hours ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

10 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

1 day ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 day ago