Advertisement
MIRROR FOCUS

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು | ಮಹಾರಾಷ್ಟ್ರದಿಂದ 1.20 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ | ಭೀಮಾನದಿ ಪಾತ್ರದಲ್ಲಿ ಪ್ರವಾಹ ಭೀತಿ

Share

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುವ ಬಗ್ಗೆ ಹಮಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ  ಭಾರೀ ಮಳೆ  ಮುಂದುವರೆದಿದ್ದು ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.

ಮಹಾರಾಷ್ಟ್ರದಿಂದ ಒಟ್ಟು 1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಸಿದ್ದರಿಂದ ವಿಜಯಪುರ  ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಚಡಚಣ ತಾಲೂಕಿನಲ್ಲಿ ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಉಮರಾಣಿ- ಲವಗಿ ಬ್ಯಾರೇಜ್ ಮುಳುಗಡೆಯಾಗಿದೆ.  ಭಾರೀ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಭೀಮಾ ನದಿ ಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ. ಚಡಚಣ, ಇಂಡಿ, ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ.

ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಅಂತೆಯೇ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಇನ್ನು ಭಾನುವಾರ ಬಿಸಿಲ ವಾತಾವರಣಕ್ಕೆ ಸಾಕ್ಷಿಯಾಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ಇಂದು ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago