ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

March 11, 2021
7:00 AM

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ.  ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ. 
 
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror